ಗೃಹಜ್ಯೋತಿ ನೋಂದಣಿಗೆ ಸರ್ವರ್ ಸಮಸ್ಯೆ: ಬೆಸ್ಕಾಂ, ಗ್ರಾಮ ಒನ್, ಸೇವಾ ಕೇಂದ್ರಗಳಲ್ಲೂ ಸರ್ವರ್ ಡೌನ್!

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್, ಸೈಬರ್ ಸೆಂಟರ್ ಕೇಂದ್ರಗಳಲ್ಲಿಯೂ ಸರ್ವರ್ ಡೌನ್ ಎಂಬ ನಾಮಫಲಕ ಹಾಕುವಂತಾಗಿದೆ.

ತಾಲ್ಲೂಕಿನ ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಬೆಸ್ಕಾಂ ಕಚೇರಿಗಳಲ್ಲಿ ಆರಂಭಿಸಿರುವ ಒಟ್ಟು 6 ಕೌಂಟರ್ ಗಳ ಮುಂದೆ ಜನರು ತಮ್ಮ ಆರ್.ಆರ್ ನಂಬರ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಿಡಿದು ನೋಂದಾಯಿಸಲು ಕಾಯುತ್ತಾ ಹೈರಾಣಾಗುತ್ತಿದ್ದಾರೆ.

ತಾಲ್ಲೂಕಿನಾದ್ಯಂತ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಳು ಜನತೆ ಉತ್ಸುಕರಾಗಿದ್ದಾರೆ. ಕಳೆದ ಭಾನುವಾರದಂದು ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿದ್ದು ಗುರುವಾರ ತನಕವೂ ಬೆಸ್ಕಾಂ ಕಚೇರಿ ಮತ್ತು ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಟೆಕ್ನಿಕಲ್ ಪ್ರಾಬ್ಲಂ ಎದುರಾಗುತ್ತಲೇ ಇದೆ. ಬೆಸ್ಕಾಂ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದೆ. ಇತ್ತ ಜನರು ಸರ್ವರ್ ಸರಿ ಹೋಗಬಹುದು ಎಂದು ಕೌಂಟರ್ ಮುಂದೆಯೆ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಕೆಲವರು ನಾಳೆ ಬಂದರಾಯಿತು ಎಂದು ವಾಪಸ್ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ತಾಲ್ಲೂಕಿನಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಸರತಿ ಸಾಲಿನಲ್ಲಿ ನಿಂತು ಯೋಜನೆಗೆ ನೋಂದಾಯಿಸಿದವರು ನಿಟ್ಟುಸಿರು ಬಿಟ್ಟರೆ, ನೋಂದಣಿಗೆ ಕಾಯುತ್ತಿದ್ದವರು ಪರಿತಪಿಸುತ್ತಿದ್ದಾರೆ. ಇನ್ನೂ ನೋಂದಾಯಿಸುವ ಗ್ರಾಹಕರ ಮೊಬೈಲ್ ಗೆ ಒಟಿಪಿ ಬರುವುದರಿಂದ ಕೇಂದ್ರಗಳಲ್ಲಿ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಲು ಬಂದ ಅನೇಕರು ಅಂಗಡಿ ಮಾಲೀಕರನ್ನು ಮನವಿ ಮಾಡಿಕೊಂಡು ದಾಖಲೆಗಳನ್ನು ಮತ್ತು ಮೊಬೈಲ್ ಸಂಖ್ಯೆ ನೀಡಿ ಸರ್ವರ್ ಸರಿಹೋದಾಗ ಅಪ್ ಲೋಡ್ ಮಾಡಿ ಎಂದು ಹೇಳಿ ಹೋಗುತ್ತಿದ್ದವರ ಸಂಖ್ಯೆ ಹೆಚ್ಚಾಗಿತ್ತು.

ಮಾರ್ಗಸೂಚಿ ಸರಳೀಕರಣಗೊಳಿಸಿ:

ಗೃಹಜ್ಯೋತಿ ಯೋಜನೆಯ 200 ಯೂನಿಟ್ ಬಳಕೆಯ ಹೆಚ್ಚಿನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರೆ ಆಗಿದ್ದಾರೆ. ಹೀಗಾಗಿ ಗ್ರಾಮಾಂತರ ಭಾಗದಲ್ಲಿ ಸುಮಾರು 75 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕವನ್ನು ಪಡೆದ ಜನರು ವಯಸ್ಸು ಮತ್ತು ವಿವಿಧ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಅವರ ಅವಲಂಬಿತರು/ಕುಟುಂಬಸ್ಥರು ಆರ್.ಆರ್ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದೆ ನಿಧನರಾದವರ ಹೆಸರಿನಲ್ಲಿಯೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡಿಕೊಂಡು ಬಂದಿರುತ್ತಾರೆ. ಅಂತಹ ಜನರು ಈಗ ಗೃಹಜ್ಯೋತಿ ಯೋಜನೆಯ ಲಾಭಕ್ಕಾಗಿ ತಮ್ಮ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೆಸರು ಬದಲಾವಣೆ ಬಳಿಕವಷ್ಟೆ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ರಾಜ್ಯಾದ್ಯಂತ ಏಕಕಾಲಕ್ಕೆ ಅರ್ಜಿಗಳ ಸಲ್ಲಿಕೆ ಕಾರ್ಯ ನಡೆಯುತ್ತಿರುವುದರಿಂದ ಸರ್ವರ್ ನಲ್ಲಿ ಸಮಸ್ಯೆ ಕಾಣುತ್ತಿದೆ. ನಿಧಾನಗತಿಯಲ್ಲಿ ನಡೆಯುತ್ತಿರುವ ನೋಂದಣಿ ಮುಂದಿನ ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ. ತಾಲ್ಲೂಕಿನಲ್ಲಿ ಮೇಳೆಕೋಟೆಯಲ್ಲಿ ಒಂದು ಕೌಂಟರ್, ನಗರದ ಬೆಸ್ಕಾಂ ಕಚೇರಿಯಲ್ಲಿ ಒಂದು ಕೌಂಟರ್, ಹಳೆ ಕೆಇಬಿ ಆಫೀಸ್ ನಲ್ಲಿ ಎರಡು ಕೌಂಟರ್ ಸೇರಿ ವಿವಿಧೆಡೆ ಒಟ್ಟು ಆರು ಕೌಂಟರ್ ಗಳನ್ನು ತೆರೆಯಲಾಗಿದೆ. ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಮುಖಾಂತರವೂ ನೋಂದಯಿಸಿಕೊಳ್ಳಬಹುದು. ತಾಲ್ಲೂಕಿನಲ್ಲಿ ಈವರೆಗೆ ಸುಮಾರು ೧೦೦೦ಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿಗೆ ಯಾವುದೇ ಅಂತ್ಯದ ದಿನಾಂಕ ನಿಗದಿ ಇಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಹೀಗಾಗಿ ಸಾರ್ವಜನಿಕರು ಆತಂಕ ಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಮಂಜುನಾಥ್ ಹೇಳಿದ್ದಾರೆ.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

5 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

16 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

19 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago