ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಂ ಗೃಹಜ್ಯೋತಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ತಾಂತ್ರಿಕ ತೊಡಕುಗಳ ಕಾರಣಗಳು ಜನರ ನಿದ್ದೆ ಕೆಡೆಸಿದೆ. ಬೆಸ್ಕಾಂ ಕಚೇರಿಗಳಲ್ಲಿ ಮಾತ್ರವಲ್ಲದೆ ಗ್ರಾಮ ಒನ್, ಸೈಬರ್ ಸೆಂಟರ್ ಕೇಂದ್ರಗಳಲ್ಲಿಯೂ ಸರ್ವರ್ ಡೌನ್ ಎಂಬ ನಾಮಫಲಕ ಹಾಕುವಂತಾಗಿದೆ.
ತಾಲ್ಲೂಕಿನ ನಗರ, ಗ್ರಾಮಾಂತರ ಸೇರಿ ವಿವಿಧೆಡೆ ಬೆಸ್ಕಾಂ ಕಚೇರಿಗಳಲ್ಲಿ ಆರಂಭಿಸಿರುವ ಒಟ್ಟು 6 ಕೌಂಟರ್ ಗಳ ಮುಂದೆ ಜನರು ತಮ್ಮ ಆರ್.ಆರ್ ನಂಬರ್, ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಿಡಿದು ನೋಂದಾಯಿಸಲು ಕಾಯುತ್ತಾ ಹೈರಾಣಾಗುತ್ತಿದ್ದಾರೆ.
ತಾಲ್ಲೂಕಿನಾದ್ಯಂತ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಳು ಜನತೆ ಉತ್ಸುಕರಾಗಿದ್ದಾರೆ. ಕಳೆದ ಭಾನುವಾರದಂದು ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿದ್ದು ಗುರುವಾರ ತನಕವೂ ಬೆಸ್ಕಾಂ ಕಚೇರಿ ಮತ್ತು ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಟೆಕ್ನಿಕಲ್ ಪ್ರಾಬ್ಲಂ ಎದುರಾಗುತ್ತಲೇ ಇದೆ. ಬೆಸ್ಕಾಂ ತಾಂತ್ರಿಕ ತಂಡವು ಸಮಸ್ಯೆಯನ್ನು ಪರಿಹರಿಸಲು ಕಾರ್ಯನಿರ್ವಹಿಸುತ್ತಿದೆ. ಇತ್ತ ಜನರು ಸರ್ವರ್ ಸರಿ ಹೋಗಬಹುದು ಎಂದು ಕೌಂಟರ್ ಮುಂದೆಯೆ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಕೆಲವರು ನಾಳೆ ಬಂದರಾಯಿತು ಎಂದು ವಾಪಸ್ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.
ತಾಲ್ಲೂಕಿನಲ್ಲಿ ಈವರೆಗೆ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ನೋಂದಣಿಯಾಗಿವೆ. ಸರತಿ ಸಾಲಿನಲ್ಲಿ ನಿಂತು ಯೋಜನೆಗೆ ನೋಂದಾಯಿಸಿದವರು ನಿಟ್ಟುಸಿರು ಬಿಟ್ಟರೆ, ನೋಂದಣಿಗೆ ಕಾಯುತ್ತಿದ್ದವರು ಪರಿತಪಿಸುತ್ತಿದ್ದಾರೆ. ಇನ್ನೂ ನೋಂದಾಯಿಸುವ ಗ್ರಾಹಕರ ಮೊಬೈಲ್ ಗೆ ಒಟಿಪಿ ಬರುವುದರಿಂದ ಕೇಂದ್ರಗಳಲ್ಲಿ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಸೇವಾ ಸಿಂಧು ಕೇಂದ್ರಗಳಲ್ಲಿ ನೋಂದಾಯಿಸಲು ಬಂದ ಅನೇಕರು ಅಂಗಡಿ ಮಾಲೀಕರನ್ನು ಮನವಿ ಮಾಡಿಕೊಂಡು ದಾಖಲೆಗಳನ್ನು ಮತ್ತು ಮೊಬೈಲ್ ಸಂಖ್ಯೆ ನೀಡಿ ಸರ್ವರ್ ಸರಿಹೋದಾಗ ಅಪ್ ಲೋಡ್ ಮಾಡಿ ಎಂದು ಹೇಳಿ ಹೋಗುತ್ತಿದ್ದವರ ಸಂಖ್ಯೆ ಹೆಚ್ಚಾಗಿತ್ತು.
ಗೃಹಜ್ಯೋತಿ ಯೋಜನೆಯ 200 ಯೂನಿಟ್ ಬಳಕೆಯ ಹೆಚ್ಚಿನ ಫಲಾನುಭವಿಗಳು ಗ್ರಾಮೀಣ ಪ್ರದೇಶದವರೆ ಆಗಿದ್ದಾರೆ. ಹೀಗಾಗಿ ಗ್ರಾಮಾಂತರ ಭಾಗದಲ್ಲಿ ಸುಮಾರು 75 ವರ್ಷಗಳ ಹಿಂದೆ ವಿದ್ಯುತ್ ಸಂಪರ್ಕವನ್ನು ಪಡೆದ ಜನರು ವಯಸ್ಸು ಮತ್ತು ವಿವಿಧ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದ್ದಾರೆ. ಅವರ ಅವಲಂಬಿತರು/ಕುಟುಂಬಸ್ಥರು ಆರ್.ಆರ್ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳದೆ ನಿಧನರಾದವರ ಹೆಸರಿನಲ್ಲಿಯೇ ಪ್ರತಿ ತಿಂಗಳು ವಿದ್ಯುತ್ ಬಿಲ್ ಪಾವತಿ ಮಾಡಿಕೊಂಡು ಬಂದಿರುತ್ತಾರೆ. ಅಂತಹ ಜನರು ಈಗ ಗೃಹಜ್ಯೋತಿ ಯೋಜನೆಯ ಲಾಭಕ್ಕಾಗಿ ತಮ್ಮ ದಾಖಲೆಗಳನ್ನು ಸಲ್ಲಿಸುವ ಮೂಲಕ ಹೆಸರನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಹೆಸರು ಬದಲಾವಣೆ ಬಳಿಕವಷ್ಟೆ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ರಾಜ್ಯಾದ್ಯಂತ ಏಕಕಾಲಕ್ಕೆ ಅರ್ಜಿಗಳ ಸಲ್ಲಿಕೆ ಕಾರ್ಯ ನಡೆಯುತ್ತಿರುವುದರಿಂದ ಸರ್ವರ್ ನಲ್ಲಿ ಸಮಸ್ಯೆ ಕಾಣುತ್ತಿದೆ. ನಿಧಾನಗತಿಯಲ್ಲಿ ನಡೆಯುತ್ತಿರುವ ನೋಂದಣಿ ಮುಂದಿನ ಒಂದು ವಾರದಲ್ಲಿ ಎಲ್ಲವೂ ಸರಿಹೋಗಲಿದೆ. ತಾಲ್ಲೂಕಿನಲ್ಲಿ ಮೇಳೆಕೋಟೆಯಲ್ಲಿ ಒಂದು ಕೌಂಟರ್, ನಗರದ ಬೆಸ್ಕಾಂ ಕಚೇರಿಯಲ್ಲಿ ಒಂದು ಕೌಂಟರ್, ಹಳೆ ಕೆಇಬಿ ಆಫೀಸ್ ನಲ್ಲಿ ಎರಡು ಕೌಂಟರ್ ಸೇರಿ ವಿವಿಧೆಡೆ ಒಟ್ಟು ಆರು ಕೌಂಟರ್ ಗಳನ್ನು ತೆರೆಯಲಾಗಿದೆ. ಗೃಹಜ್ಯೋತಿ ಯೋಜನೆ ನೋಂದಣಿ ಪ್ರಕ್ರಿಯೆ ಅತ್ಯಂತ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಮುಖಾಂತರವೂ ನೋಂದಯಿಸಿಕೊಳ್ಳಬಹುದು. ತಾಲ್ಲೂಕಿನಲ್ಲಿ ಈವರೆಗೆ ಸುಮಾರು ೧೦೦೦ಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿಗೆ ಯಾವುದೇ ಅಂತ್ಯದ ದಿನಾಂಕ ನಿಗದಿ ಇಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಹೀಗಾಗಿ ಸಾರ್ವಜನಿಕರು ಆತಂಕ ಪಡದೆ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ಮಂಜುನಾಥ್ ಹೇಳಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…