
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಅಕ್ರಮ ರೀಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್ ಗಳಿಗೆ ಪ್ರಮುಖ ದೇವಸ್ಥಾನದಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.
ಇಂದು ರಾಜ್ಯದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ..
ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಹೇಳಿದೆ…