ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಅಕ್ರಮ ರೀಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್ ಗಳಿಗೆ ಪ್ರಮುಖ ದೇವಸ್ಥಾನದಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.
ಇಂದು ರಾಜ್ಯದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ..
ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಹೇಳಿದೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…