“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ ಸಿಲಿಂಡರ್ಗ ಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪಿಣ್ಯ ದಲ್ಲಿ 45, ಚಿಕ್ಕಜಾಲದಲ್ಲಿ 209 ಶಿವಮೊಗ್ಗ ಜಿಲ್ಲೆಯಲ್ಲಿ 3, ಯಾದಗಿರಿ ಜಿಲ್ಲೆಯಲ್ಲಿ 46 ದಾವಣಗರೆ 13 ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಿ ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಅಕ್ರಮ ರೀಫಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜಂಸ್ಸಿ ಅಂಗಡಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ 20% ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲಾ ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣಗಳ ಕ್ಯಾಂಟಿನ್ ಗಳಿಗೆ ಪ್ರಮುಖ ದೇವಸ್ಥಾನದಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿಗಳಲ್ಲಿ / ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇರಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಸೂಚಿಸಲಾಗಿದೆ.

ಇಂದು ರಾಜ್ಯದ್ಯಂತ 14.2 kg ಯ ಗೃಹ ಬಳಕೆಯ ಒಟ್ಟು 386363 ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ 6371 ಸಿಲಿಂಡರ್ ಗಳನ್ನು ವಿತರಣೆ ಮಾಡಲಾಗಿದೆ..

ಗೃಹ ಬಳಕೆಯ ಸಿಲಿಂಡರ್ ಗಳ ಉಪಯೊಗಕ್ಕೆ ಯಾವುದೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ ಇಲಾಖೆ ಹೇಳಿದೆ…

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

3 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

6 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

12 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

13 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

1 day ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

1 day ago