ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ, ದೊಡ್ಡಬೆಳವಂಗಲ, ಹೊಸಹಳ್ಳಿ, ರಾಜಾನುಕುಂಟೆ, ವಿಶ್ವನಾಥಪುರ, ಚನ್ನರಾಯಪಟ್ಟಣ, ವಿಜಯಪುರ ಪೊಲೀಸ್ ಠಾಣೆಗಳಿಗೆ ಸುಮಾರು 200 ಮಂದಿ ಗೃಹರಕ್ಷಕರ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಗಳು ನಗರದ ಡಿವೈಎಸ್ಪಿ ಕಚೇರಿಯಲ್ಲಿ ದೊರೆಯುತ್ತಿದ್ದು, ಅರ್ಜಿ ಪಡೆದವರು 10 ದಿನಗಳ ಒಳಗಾಗಿ ಸಲ್ಲಿಸುವಂತೆ ಡಿವೈಎಸ್ಪಿ ರವಿ ಅವರು ಕೋರಿದ್ದಾರೆ.

ಗೃಹರಕ್ಷಕರ ನೇಮಕಾತಿಗೆ ಅರ್ಹತೆಗಳು: ಲಗತ್ತಿಸಬೇಕಾದ ದಾಖಲಾತಿಗಳು

1. ಮೂಲ ವೈದ್ಯಕೀಯ ಪ್ರಮಾಣ ಪತ್ರ ಲಗತ್ತಿಸುವುದು.

2. ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ ಅಥವಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು.

3. ಕಳೆದ 06 ತಿಂಗಳ ಅವಧಿಯ ವಾಸವಿರುವ ಸ್ಥಳೀಯ ವಿಳಾಸ ಪ್ರಮಾಣ ಪತ್ರ ನಕಲು ಪ್ರತಿ ಲಗತ್ತಿಸುವುದು.

A) ಆಧಾರ್ ಕಾರ್ಡ್

B) ಚುನಾವಣಾ ಗುರುತಿನ ಚೀಟಿ

C) ಡಿ.ಎಲ್(ಡ್ರೈವಿಂಗ್ ಲೈಸೆನ್ಸ್)

4. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ವಯಸ್ಸು 19 ರಿಂದ 40 ವರ್ಷದ ಒಳಗಿರಬೇಕು.

5. ದೈಹಿಕವಾಗಿ ಸದೃಢರಾಗಿರಬೇಕು.

6.ಗೃಹರಕ್ಷಕರ ಅರ್ಜಿ ನಮೂನೆ “ಎ” 2ನೇ ಪುಟದಲ್ಲಿ ಇಬ್ಬರು ಗಣ್ಯ ವ್ಯಕ್ತಿಗಳ ಮೊಹರು ಮತ್ತು ಸಹಿ ಮಾಡಿಸುವುದು.

7. ಇತ್ತೀಚಿನ ಎರಡು ಪಾಸ್‌ಪೋರ್ಟ್ ಭಾವ ಚಿತ್ರಗಳು

8. ಅರ್ಜಿದಾರರು ತಾವೇ ಪೊಲೀಸ್ ವೆರಿಫಿಕೇಶನ್ ಮಾಡಿಸಿ ಕೊಡತಕ್ಕದ್ದು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

8 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

11 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago