ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ, ದೊಡ್ಡಬೆಳವಂಗಲ, ಹೊಸಹಳ್ಳಿ, ರಾಜಾನುಕುಂಟೆ, ವಿಶ್ವನಾಥಪುರ, ಚನ್ನರಾಯಪಟ್ಟಣ, ವಿಜಯಪುರ ಪೊಲೀಸ್ ಠಾಣೆಗಳಿಗೆ ಸುಮಾರು 200 ಮಂದಿ ಗೃಹರಕ್ಷಕರ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಗಳು ನಗರದ ಡಿವೈಎಸ್ಪಿ ಕಚೇರಿಯಲ್ಲಿ ದೊರೆಯುತ್ತಿದ್ದು, ಅರ್ಜಿ ಪಡೆದವರು 10 ದಿನಗಳ ಒಳಗಾಗಿ ಸಲ್ಲಿಸುವಂತೆ ಡಿವೈಎಸ್ಪಿ ರವಿ ಅವರು ಕೋರಿದ್ದಾರೆ.

ಗೃಹರಕ್ಷಕರ ನೇಮಕಾತಿಗೆ ಅರ್ಹತೆಗಳು: ಲಗತ್ತಿಸಬೇಕಾದ ದಾಖಲಾತಿಗಳು

1. ಮೂಲ ವೈದ್ಯಕೀಯ ಪ್ರಮಾಣ ಪತ್ರ ಲಗತ್ತಿಸುವುದು.

2. ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ ಅಥವಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು.

3. ಕಳೆದ 06 ತಿಂಗಳ ಅವಧಿಯ ವಾಸವಿರುವ ಸ್ಥಳೀಯ ವಿಳಾಸ ಪ್ರಮಾಣ ಪತ್ರ ನಕಲು ಪ್ರತಿ ಲಗತ್ತಿಸುವುದು.

A) ಆಧಾರ್ ಕಾರ್ಡ್

B) ಚುನಾವಣಾ ಗುರುತಿನ ಚೀಟಿ

C) ಡಿ.ಎಲ್(ಡ್ರೈವಿಂಗ್ ಲೈಸೆನ್ಸ್)

4. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ವಯಸ್ಸು 19 ರಿಂದ 40 ವರ್ಷದ ಒಳಗಿರಬೇಕು.

5. ದೈಹಿಕವಾಗಿ ಸದೃಢರಾಗಿರಬೇಕು.

6.ಗೃಹರಕ್ಷಕರ ಅರ್ಜಿ ನಮೂನೆ “ಎ” 2ನೇ ಪುಟದಲ್ಲಿ ಇಬ್ಬರು ಗಣ್ಯ ವ್ಯಕ್ತಿಗಳ ಮೊಹರು ಮತ್ತು ಸಹಿ ಮಾಡಿಸುವುದು.

7. ಇತ್ತೀಚಿನ ಎರಡು ಪಾಸ್‌ಪೋರ್ಟ್ ಭಾವ ಚಿತ್ರಗಳು

8. ಅರ್ಜಿದಾರರು ತಾವೇ ಪೊಲೀಸ್ ವೆರಿಫಿಕೇಶನ್ ಮಾಡಿಸಿ ಕೊಡತಕ್ಕದ್ದು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

13 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

19 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago