ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ, ದೊಡ್ಡಬೆಳವಂಗಲ, ಹೊಸಹಳ್ಳಿ, ರಾಜಾನುಕುಂಟೆ, ವಿಶ್ವನಾಥಪುರ, ಚನ್ನರಾಯಪಟ್ಟಣ, ವಿಜಯಪುರ ಪೊಲೀಸ್ ಠಾಣೆಗಳಿಗೆ ಸುಮಾರು 200 ಮಂದಿ ಗೃಹರಕ್ಷಕರ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಗಳು ನಗರದ ಡಿವೈಎಸ್ಪಿ ಕಚೇರಿಯಲ್ಲಿ ದೊರೆಯುತ್ತಿದ್ದು, ಅರ್ಜಿ ಪಡೆದವರು 10 ದಿನಗಳ ಒಳಗಾಗಿ ಸಲ್ಲಿಸುವಂತೆ ಡಿವೈಎಸ್ಪಿ ರವಿ ಅವರು ಕೋರಿದ್ದಾರೆ.

ಗೃಹರಕ್ಷಕರ ನೇಮಕಾತಿಗೆ ಅರ್ಹತೆಗಳು: ಲಗತ್ತಿಸಬೇಕಾದ ದಾಖಲಾತಿಗಳು

1. ಮೂಲ ವೈದ್ಯಕೀಯ ಪ್ರಮಾಣ ಪತ್ರ ಲಗತ್ತಿಸುವುದು.

2. ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ ಅಥವಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು.

3. ಕಳೆದ 06 ತಿಂಗಳ ಅವಧಿಯ ವಾಸವಿರುವ ಸ್ಥಳೀಯ ವಿಳಾಸ ಪ್ರಮಾಣ ಪತ್ರ ನಕಲು ಪ್ರತಿ ಲಗತ್ತಿಸುವುದು.

A) ಆಧಾರ್ ಕಾರ್ಡ್

B) ಚುನಾವಣಾ ಗುರುತಿನ ಚೀಟಿ

C) ಡಿ.ಎಲ್(ಡ್ರೈವಿಂಗ್ ಲೈಸೆನ್ಸ್)

4. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ವಯಸ್ಸು 19 ರಿಂದ 40 ವರ್ಷದ ಒಳಗಿರಬೇಕು.

5. ದೈಹಿಕವಾಗಿ ಸದೃಢರಾಗಿರಬೇಕು.

6.ಗೃಹರಕ್ಷಕರ ಅರ್ಜಿ ನಮೂನೆ “ಎ” 2ನೇ ಪುಟದಲ್ಲಿ ಇಬ್ಬರು ಗಣ್ಯ ವ್ಯಕ್ತಿಗಳ ಮೊಹರು ಮತ್ತು ಸಹಿ ಮಾಡಿಸುವುದು.

7. ಇತ್ತೀಚಿನ ಎರಡು ಪಾಸ್‌ಪೋರ್ಟ್ ಭಾವ ಚಿತ್ರಗಳು

8. ಅರ್ಜಿದಾರರು ತಾವೇ ಪೊಲೀಸ್ ವೆರಿಫಿಕೇಶನ್ ಮಾಡಿಸಿ ಕೊಡತಕ್ಕದ್ದು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

3 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

5 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

9 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago