ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ, ದೊಡ್ಡಬೆಳವಂಗಲ, ಹೊಸಹಳ್ಳಿ, ರಾಜಾನುಕುಂಟೆ, ವಿಶ್ವನಾಥಪುರ, ಚನ್ನರಾಯಪಟ್ಟಣ, ವಿಜಯಪುರ ಪೊಲೀಸ್ ಠಾಣೆಗಳಿಗೆ ಸುಮಾರು 200 ಮಂದಿ ಗೃಹರಕ್ಷಕರ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಗಳು ನಗರದ ಡಿವೈಎಸ್ಪಿ ಕಚೇರಿಯಲ್ಲಿ ದೊರೆಯುತ್ತಿದ್ದು, ಅರ್ಜಿ ಪಡೆದವರು 10 ದಿನಗಳ ಒಳಗಾಗಿ ಸಲ್ಲಿಸುವಂತೆ ಡಿವೈಎಸ್ಪಿ ರವಿ ಅವರು ಕೋರಿದ್ದಾರೆ.

ಗೃಹರಕ್ಷಕರ ನೇಮಕಾತಿಗೆ ಅರ್ಹತೆಗಳು: ಲಗತ್ತಿಸಬೇಕಾದ ದಾಖಲಾತಿಗಳು

1. ಮೂಲ ವೈದ್ಯಕೀಯ ಪ್ರಮಾಣ ಪತ್ರ ಲಗತ್ತಿಸುವುದು.

2. ಜನ್ಮ ದಿನಾಂಕಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ ಅಥವಾ ವರ್ಗಾವಣೆ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು.

3. ಕಳೆದ 06 ತಿಂಗಳ ಅವಧಿಯ ವಾಸವಿರುವ ಸ್ಥಳೀಯ ವಿಳಾಸ ಪ್ರಮಾಣ ಪತ್ರ ನಕಲು ಪ್ರತಿ ಲಗತ್ತಿಸುವುದು.

A) ಆಧಾರ್ ಕಾರ್ಡ್

B) ಚುನಾವಣಾ ಗುರುತಿನ ಚೀಟಿ

C) ಡಿ.ಎಲ್(ಡ್ರೈವಿಂಗ್ ಲೈಸೆನ್ಸ್)

4. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ವಯಸ್ಸು 19 ರಿಂದ 40 ವರ್ಷದ ಒಳಗಿರಬೇಕು.

5. ದೈಹಿಕವಾಗಿ ಸದೃಢರಾಗಿರಬೇಕು.

6.ಗೃಹರಕ್ಷಕರ ಅರ್ಜಿ ನಮೂನೆ “ಎ” 2ನೇ ಪುಟದಲ್ಲಿ ಇಬ್ಬರು ಗಣ್ಯ ವ್ಯಕ್ತಿಗಳ ಮೊಹರು ಮತ್ತು ಸಹಿ ಮಾಡಿಸುವುದು.

7. ಇತ್ತೀಚಿನ ಎರಡು ಪಾಸ್‌ಪೋರ್ಟ್ ಭಾವ ಚಿತ್ರಗಳು

8. ಅರ್ಜಿದಾರರು ತಾವೇ ಪೊಲೀಸ್ ವೆರಿಫಿಕೇಶನ್ ಮಾಡಿಸಿ ಕೊಡತಕ್ಕದ್ದು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago