ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳು ತಪ್ಪದೇ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಪ್ರಜೆಗಳ ಹಿತ ಕಾಯುವುದು ರಾಜಕೀಯ ಧರ್ಮ. ಎಷ್ಟೇ ವಿರೋಧ, ಟೀಕೆಗಳು ಬಂದರೂ ಈ ನಮ್ಮ ನಿಲುವಿನಲ್ಲಿ ಎಳ್ಳಷ್ಟು ಬದಲಾಗದು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸುಮಾರು 1. 28 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಮೂಲಕ ಅನುಕೂಲವಾಗಲಿದೆ. ಮುಂದಿನ ತಿಂಗಳಲ್ಲಿ ಮನೆ ಯಜಮಾನಿಗೆ ₹ 2,000/- ಹಣ ಜಮಾ ಆಗಲಿದೆ. ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿದ ದಿನ, ಇಂದೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಪುಣ್ಯ ಎಂದರು.
ಮನೆ ಮನೆಗೂ ಈ ಯೋಜನೆ ತಲುಪಲಿ ಸರ್ಕಾರ ನೀಡುತ್ತಿರುವ ₹ 2000/- ರೂ,ಗಳು ಪ್ರತಿ ಬಡ ಕುಟುಂಬದ ಹಸಿವನ್ನ ನೀಗಿಸಲು ಸಹಕಾರಿಯಾಗಲಿದೆ. ನಾನೊಬ್ಬ ರೈತನ ಮಗಳು ಕಷ್ಟವನ್ನು ಹತ್ತಿರದಿಂದ ನೋಡಿದ್ದೇನೆ. ಹಳ್ಳಿಯ ಜೀವನ ಅನುಭವಿಸಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಶಾಸಕರಾದ ಶ್ರೀನಿವಾಸ ಮಾನೆ, ಆಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ಎ.ಆರ್.ಕೃಷ್ಣಮೂರ್ತಿ, ಎನ್.ಎಚ್.ಕೋನರಡ್ಡಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸಲೀಂ ಅಹಮದ್, ಚನ್ನರಾಜ ಹಟ್ಟಿಹೊಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ ಉಪಸ್ಥಿತರಿದ್ದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…