ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳು ತಪ್ಪದೇ ಅರ್ಜಿ ಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಪ್ರಜೆಗಳ ಹಿತ ಕಾಯುವುದು ರಾಜಕೀಯ ಧರ್ಮ. ಎಷ್ಟೇ ವಿರೋಧ, ಟೀಕೆಗಳು ಬಂದರೂ ಈ ನಮ್ಮ ನಿಲುವಿನಲ್ಲಿ ಎಳ್ಳಷ್ಟು ಬದಲಾಗದು ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಸುಮಾರು 1. 28 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಮೂಲಕ ಅನುಕೂಲವಾಗಲಿದೆ. ಮುಂದಿನ ತಿಂಗಳಲ್ಲಿ ಮನೆ ಯಜಮಾನಿಗೆ ₹ 2,000/- ಹಣ ಜಮಾ ಆಗಲಿದೆ. ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರು ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿದ ದಿನ, ಇಂದೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಪುಣ್ಯ ಎಂದರು.
ಮನೆ ಮನೆಗೂ ಈ ಯೋಜನೆ ತಲುಪಲಿ ಸರ್ಕಾರ ನೀಡುತ್ತಿರುವ ₹ 2000/- ರೂ,ಗಳು ಪ್ರತಿ ಬಡ ಕುಟುಂಬದ ಹಸಿವನ್ನ ನೀಗಿಸಲು ಸಹಕಾರಿಯಾಗಲಿದೆ. ನಾನೊಬ್ಬ ರೈತನ ಮಗಳು ಕಷ್ಟವನ್ನು ಹತ್ತಿರದಿಂದ ನೋಡಿದ್ದೇನೆ. ಹಳ್ಳಿಯ ಜೀವನ ಅನುಭವಿಸಿದ್ದೇನೆ ಎಂದು ಹೇಳಿದರು.
ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಶಾಸಕರಾದ ಶ್ರೀನಿವಾಸ ಮಾನೆ, ಆಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ಎ.ಆರ್.ಕೃಷ್ಣಮೂರ್ತಿ, ಎನ್.ಎಚ್.ಕೋನರಡ್ಡಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸಲೀಂ ಅಹಮದ್, ಚನ್ನರಾಜ ಹಟ್ಟಿಹೊಳಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ ಉಪಸ್ಥಿತರಿದ್ದರು. ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…