ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಶಿವಶಂಕರ ಎನ್

ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 27ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕುರಿತಾಗಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ನೇರ ನಗದು ಸೌಲಭ್ಯವನ್ನು ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಆಗಸ್ಟ್ 27 ರಂದು ಏಕಕಾಲದಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಲು ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮವನ್ನು ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಶಾಲಾ ಕಟ್ಟಡ ಹಾಗೂ ಸಮುದಾಯ ಭವನ, ಛತ್ರಗಳಲ್ಲಿ ಏರ್ಪಡಿಸಬಹುದಾಗಿದೆ, ರಾಜ್ಯಮಟ್ಟದ ಕಾರ್ಯಕ್ರಮವು ಬೆಳಗಾವಿಯಲ್ಲಿ ನಡೆಯುವುದರಿಂದ, ಪ್ರತಿ ಕಾರ್ಯಕ್ರಮದಲ್ಲಿ ಒಂದು ಟಿವಿ ಹಾಗೂ 10X10 ಅಳತೆಯ ಎಲ್ಇಡಿ ಪರದೆಯನ್ನು ಇಟ್ಟು ಟಿವಿ ಮೂಲಕ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರವನ್ನು ಪ್ರದರ್ಶಿಸಲು ಹಾಗೂ ಎಲ್ಇಡಿ ಪರದೆಯಲ್ಲಿ ಬೆಳಗಾವಿ ಕಾರ್ಯಕ್ರಮದ ಸ್ಥಳದಿಂದ ಸ್ಥಳೀಯ ಕಾರ್ಯಕ್ರಮದ ಸ್ಥಳದೊಂದಿಗೆ ಪರಸ್ಪರ ಸಂವಾದ ನಡೆಸುವುದು. ಹೀಗಾಗಿ ಅಗತ್ಯ ಟಿ.ವಿ ಹಾಗೂ ಎಲ್.ಇ.ಡಿ ಪರದೆಯನ್ನು ಮುಂಗಡ ಕಾಯ್ದಿರಿಸಲು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆ ಕುರಿತ ಕರಪತ್ರಗಳನ್ನು ಮನೆ ಮನೆಗೆ ವಿತರಿಸಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಲು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ನೀರು ನಿರ್ವಾಹಕರು, ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಕುಡಿಯುವ ನೀರು ಮತ್ತು ಲಘುಪಹಾರ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಿ ಎಂದರು.

ನಗರ ವ್ಯಾಪ್ತಿಯ ಸ್ಥಳೀಯ ಮಟ್ಟದ ಕಾರ್ಯಕ್ರಮವನ್ನು ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯ್ತಿ ಅಧ್ಯಕ್ಷರ ನೇತೃತ್ವದಲ್ಲಿ ನಡೆಸಲು ಶಿಷ್ಟಾಚಾರದಂತೆ ಸ್ಥಳೀಯ ಜನಪ್ರತಿನಿಧಿಗಳನ್ನು, ಸದಸ್ಯರನ್ನು, ಸಾರ್ವಜನಿಕರು ಭಾಗವಹಿಸಲು ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಉಪ ಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್ ಸೇರಿದಂತೆ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

4 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago