ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಗ್ಯಾಸ್ ಏಜೆನ್ಸಿ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಕಾಯ್ದೆಯಡಿ ನಿಗದಿತ ಬೆಲೆಗೆ ಮಾರಾಟ ಮಾಡಬೇಕು, ಸಿಲಿಂಡರ್ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಐ.ಓ.ಸಿ.ಎಲ್, ಎಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ 24 ಗ್ಯಾಸ್ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗೃಹ ಉಪಯೋಗಿ ಅನಿಲ ಸಿಲಿಂಡರ್ ಬುಕ್ ಮಾಡಲು 25 ದಿನ ಆಗಿರಬೇಕು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.

ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡಲು ಕ್ರಮ ವಹಿಸಿ.

ಪ್ರಸ್ತುತ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಅನಿಲ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.

*ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದ ಬೇಡ*

ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ನಗರಗಳಲ್ಲಿ ಯಾವುದೇ ಕುಡಿಯುವ ನೀರಿನ ಅಭಾವ ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು.
ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಬತ್ತಿದ ಬೋರ್ವೆಲ್ ಗಳ ಮರು ಭರ್ತಿ ಮಾಡಿ ಹಾಗೂ ಅಗತ್ಯವಿದ್ದಲ್ಲಿ ಹೊಸ ಬೋರ್ವೆಲ್ ಕೊರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಉಪವಿಭಾಗಾಧಿಕಾರಿ ದುರ್ಗಾ ಶ್ರೀ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago