ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು.
ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಗ್ಯಾಸ್ ಏಜೆನ್ಸಿ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಕಾಯ್ದೆಯಡಿ ನಿಗದಿತ ಬೆಲೆಗೆ ಮಾರಾಟ ಮಾಡಬೇಕು, ಸಿಲಿಂಡರ್ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಐ.ಓ.ಸಿ.ಎಲ್, ಎಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ 24 ಗ್ಯಾಸ್ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗೃಹ ಉಪಯೋಗಿ ಅನಿಲ ಸಿಲಿಂಡರ್ ಬುಕ್ ಮಾಡಲು 25 ದಿನ ಆಗಿರಬೇಕು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡಲು ಕ್ರಮ ವಹಿಸಿ.
ಪ್ರಸ್ತುತ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಅನಿಲ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
*ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದ ಬೇಡ*
ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ನಗರಗಳಲ್ಲಿ ಯಾವುದೇ ಕುಡಿಯುವ ನೀರಿನ ಅಭಾವ ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು.
ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಬತ್ತಿದ ಬೋರ್ವೆಲ್ ಗಳ ಮರು ಭರ್ತಿ ಮಾಡಿ ಹಾಗೂ ಅಗತ್ಯವಿದ್ದಲ್ಲಿ ಹೊಸ ಬೋರ್ವೆಲ್ ಕೊರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಉಪವಿಭಾಗಾಧಿಕಾರಿ ದುರ್ಗಾ ಶ್ರೀ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…