ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಹೇಳಿದರು.
ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಗ್ಯಾಸ್ ಏಜೆನ್ಸಿ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಕಾಯ್ದೆಯಡಿ ನಿಗದಿತ ಬೆಲೆಗೆ ಮಾರಾಟ ಮಾಡಬೇಕು, ಸಿಲಿಂಡರ್ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಏಜೆನ್ಸಿಗಳ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಐ.ಓ.ಸಿ.ಎಲ್, ಎಚ್.ಪಿ.ಸಿ.ಎಲ್ ಮತ್ತು ಬಿಪಿಸಿಎಲ್ ಕಂಪನಿಗಳ ಅಡಿಯಲ್ಲಿ 24 ಗ್ಯಾಸ್ ಏಜೆನ್ಸಿ ಕಾರ್ಯ ನಿರ್ವಹಿಸುತ್ತಿದೆ. ಗೃಹ ಉಪಯೋಗಿ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಗೃಹ ಉಪಯೋಗಿ ಅನಿಲ ಸಿಲಿಂಡರ್ ಬುಕ್ ಮಾಡಲು 25 ದಿನ ಆಗಿರಬೇಕು. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ, ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ತಿಳಿಸಿದರು.
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರ್ಕಾರಿ ಹಾಗೂ ಖಾಸಗಿ ವಸತಿ ನಿಲಯಗಳಲ್ಲಿ ಅಡುಗೆ ಅನಿಲದ ಕೊರತೆಯಾಗದಂತೆ ವಿತರಕರು ಸರಬರಾಜು ಮಾಡಲು ಕ್ರಮ ವಹಿಸಿ.
ಪ್ರಸ್ತುತ ಪದವಿ ಪೂರ್ವ ಪರೀಕ್ಷೆಗಳು ನಡೆಯುತ್ತಿದ್ದು, ನಂತರ ಎಸ್.ಎಸ್.ಎಲ್.ಸಿ ಮತ್ತು ಪದವಿ ಪರೀಕ್ಷೆಗಳು ನಡೆಯುವುದರಿಂದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟದಲ್ಲಿ ತೊಂದರೆಯಾಗದಂತೆ ನಿರಂತರ ಅನಿಲ ಪೂರೈಕೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
*ಬೇಸಿಗೆ ಕುಡಿಯುವ ನೀರಿನ ಸಮಸ್ಯೆಗೆ ಆಸ್ಪದ ಬೇಡ*
ಬೇಸಿಗೆ ಆರಂಭವಾದ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕು ವ್ಯಾಪ್ತಿಯ ಗ್ರಾಮಗಳು ಹಾಗೂ ನಗರಗಳಲ್ಲಿ ಯಾವುದೇ ಕುಡಿಯುವ ನೀರಿನ ಅಭಾವ ಎದುರಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು.
ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಬತ್ತಿದ ಬೋರ್ವೆಲ್ ಗಳ ಮರು ಭರ್ತಿ ಮಾಡಿ ಹಾಗೂ ಅಗತ್ಯವಿದ್ದಲ್ಲಿ ಹೊಸ ಬೋರ್ವೆಲ್ ಕೊರೆಯಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಉಪವಿಭಾಗಾಧಿಕಾರಿ ದುರ್ಗಾ ಶ್ರೀ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾಸ್ ಏಜೆನ್ಸಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…