ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…