ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…