ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…