ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…