Categories: IPL 2025

ಗೆಲುವಿನ ನಾಗಾಲೋಟ ಮುಂದುವರಿಸಿದ ಡೆಲ್ಲಿ : ಆರ್ ಸಿಬಿ ವಿರುದ್ಧ ಅಬ್ಬರಿಸಿದ ಕೆ.ಎಲ್.ರಾಹುಲ್

ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.

ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.

ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.

ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

6 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

6 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

7 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

8 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

11 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

11 hours ago