ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…