ಕನ್ನಡಿಗ ಕೆ.ಎಲ್ . ರಾಹುಲ್ ಅವರ ಸ್ಪೋಟಕ ಆಕರ್ಷಕ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆರು ವಿಕೆಟ್ಗಳ ಜಯ ದಾಖಲಿಸಿ ಗೆಲುವಿನ ನಾಗಾಲೋಟ ಮುಂದುವರಿಸಿತು.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿದರು, ಆದರೆ ಅವರ ಆಯ್ಕೆ ಸರಿಯಾಗಿರಲಿಲ್ಲ ಆರ್ಸಿಬಿ ಆರಂಭಿಕ ಆಟಗಾರರಾದ ಸ್ಟಬ್ಸ್ (37) ಹಾಗೂ ವಿರಾಟ್ ಕೊಹ್ಲಿ (22) ರನ್ ಪೇರಿಸಿ ಭದ್ರ ಅಡಿಪಾಯ ಹಾಕಿದರು.
ನಂತರ ಬಂದ ದೇವದತ್ತ್ ಪಡೀಕಲ್ (1), ಲಿವಿಂಗ್ ಸ್ಟನ್ (4) ಹಾಗೂ ಜಿತೇಶ್ ಶರ್ಮಾ (3) ರನ್ ಪೇರಿಸಿ ನಿರಾಸೆ ಮೂಡಿಸಿದರು ಆದರೆ ಕೊನೆಯಲ್ಲಿ ಭರವಸೆ ಆಟವಾಡಿದ ಟೀಮ್ ಡೇವಿಡ್ (37) ರನ್ ಪೇರಿಸಿ 160 ರ ಗಡಿ ದಾಟಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರಾದ ಡುಪ್ಲೇಸಿಸ್ (2) ಜೆಎಫ್ಎಂ (7) ಹಾಗೂ ಅಭಿಷೇಕ್ ಪೋರೆಲ್ (7) ರನ್ ಗಳಿಸಿ ಭುವನೇಶ್ವರ್ ಕುಮಾರ್ ಹಾಗೂ ಯಶ್ ದಯಾಳ್ ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
ಇಂತಹ ಸಂದರ್ಭದಲ್ಲಿ ಜೊತೆಯಾದ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ 7 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ ಅಜೇಯ 93 ರನ್ ಪೇರಿಸಿ ಗೆಲುವಿನ ದಡ ಸೇರಿಸಿದರು, ನಾಯಕ ಅಕ್ಷರ್ ಪಟೇಲ್ (15) ಹಾಗೂ ಸ್ಟಬ್ಸ್ (38) ರನ್ ಪೇರಿಸಿ ತಂಡದ ಗೆಲುವಿಗೆ ಉಡುಗೊರೆ ನೀಡಿದರು.
ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ಕಡೆ ಭದ್ರವಾಗಿ ನಿಂತು ತಂಡಕ್ಕೆ ಗೆಲುವು ತಂದು ಕೊಟ್ಟ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…