ತಂದೆ ಮತ್ತು ಕಿರಿಯ ಸಹೋದರನನ್ನು ಕೊಂದು ದೇಹವನ್ನು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ 15 ವರ್ಷದ ಬಾಲಕಿ. ಎರಡು ತಿಂಗಳ ನಂತರ ಪೊಲೀಸರು ಬಾಲಕಿಯನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿ 15 ವರ್ಷದ ಬಾಲಕಿ ಸ್ಥಳೀಯ ನಿವಾಸಿ ಮುಕುಲ್ ಸಿಂಗ್ (19) ನನ್ನು ಪ್ರೀತಿಸುತ್ತಿದ್ದಳು.
ಸೆಪ್ಟೆಂಬರ್ 2023 ರಲ್ಲಿ ಮುಕುಲ್ ಜೊತೆ ಓಡಿಹೋಗಿದ್ದಳು, ಇದರ ಪರಿಣಾಮವಾಗಿ ಆತನನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಯಿತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಇಬ್ಬರೂ ಹುಡುಗಿಯ ತಂದೆಯನ್ನು ಕೊಲ್ಲಲು ಸಂಚು ರೂಪಿಸಿದರು.
19 ವರ್ಷದ ಯುವಕನೊಂದಿಗಿನ ಸಂಬಂಧವನ್ನು ವಿರೋಧಿಸಿದ ಕಾರಣ ಹುಡುಗಿಯ ತಂದೆಯನ್ನು ಕೊಂದರು ಮತ್ತು ಅಪರಾಧವನ್ನು ನೋಡಿದ್ದರಿಂದ ಆಕೆಯ ಸಹೋದರನನ್ನು ಕೊಲ್ಲಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಚಾರಣೆ ವೇಳೆ ಬಾಲಕಿ ತನ್ನ ತಂದೆ ರಾಜ್ಕುಮಾರ್ ವಿಶ್ವಕರ್ಮನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದು ಮುಕುಲ್ ಎಂದು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ದುಷ್ಕರ್ಮಿಗಳು ನೆರೆಹೊರೆಯವರು ಎಂದು ಹರಿದ್ವಾರ ಪೊಲೀಸರು ಬಹಿರಂಗಪಡಿಸಿದ್ದಾರೆ ಮತ್ತು ಮುಕುಲ್ ಅವರ ತಂದೆ ಕೂಡ ರೈಲ್ವೆಯಲ್ಲಿ ಕೆಲಸ ಮಾಡುತ್ತಾರೆ. ಅಪರಾಧದ ನಂತರ, ಇಬ್ಬರು ಹರಿದ್ವಾರ ತಲುಪುವ ಮೊದಲು ಗೋವಾ, ಬೆಂಗಳೂರು, ಮುಂಬೈ, ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರಯಾಣಿಸಿದರು, ಅಲ್ಲಿ ಮುಕುಲ್ “ಹುಡುಗಿಯನ್ನು ಒಬ್ಬಂಟಿಯಾಗಿ ಬಿಟ್ಟು ಓಡಿಹೋಗಿದ್ದಾನೆ ಎಂದು ತಿಳಿಸಿದ್ದಾರೆ.
ಸದ್ಯ ತನ್ನ ತಂದೆ ಮತ್ತು ಸಹೋದರನನ್ನು ಕೊಂದ ಆರೋಪದಲ್ಲಿ ಪರಾರಿಯಾಗಿದ್ದ 15 ವರ್ಷದ ಬಾಲಕಿಯನ್ನು ಉತ್ತರಾಖಂಡದ ಹರಿದ್ವಾರದಲ್ಲಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಆಕೆಯ ಸಂಗಾತಿ ಇನ್ನೂ ನಾಪತ್ತೆಯಾಗಿದ್ದಾನೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…