ತಂದೆ ಮತ್ತು ಕಿರಿಯ ಸಹೋದರನನ್ನು ಕೊಂದು ದೇಹವನ್ನು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ 15 ವರ್ಷದ ಬಾಲಕಿ. ಎರಡು ತಿಂಗಳ ನಂತರ ಪೊಲೀಸರು ಬಾಲಕಿಯನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರದಲ್ಲಿ 15 ವರ್ಷದ ಬಾಲಕಿ ಸ್ಥಳೀಯ ನಿವಾಸಿ ಮುಕುಲ್ ಸಿಂಗ್ (19) ನನ್ನು ಪ್ರೀತಿಸುತ್ತಿದ್ದಳು.
ಸೆಪ್ಟೆಂಬರ್ 2023 ರಲ್ಲಿ ಮುಕುಲ್ ಜೊತೆ ಓಡಿಹೋಗಿದ್ದಳು, ಇದರ ಪರಿಣಾಮವಾಗಿ ಆತನನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಯಿತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಇಬ್ಬರೂ ಹುಡುಗಿಯ ತಂದೆಯನ್ನು ಕೊಲ್ಲಲು ಸಂಚು ರೂಪಿಸಿದರು.
19 ವರ್ಷದ ಯುವಕನೊಂದಿಗಿನ ಸಂಬಂಧವನ್ನು ವಿರೋಧಿಸಿದ ಕಾರಣ ಹುಡುಗಿಯ ತಂದೆಯನ್ನು ಕೊಂದರು ಮತ್ತು ಅಪರಾಧವನ್ನು ನೋಡಿದ್ದರಿಂದ ಆಕೆಯ ಸಹೋದರನನ್ನು ಕೊಲ್ಲಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ವಿಚಾರಣೆ ವೇಳೆ ಬಾಲಕಿ ತನ್ನ ತಂದೆ ರಾಜ್ಕುಮಾರ್ ವಿಶ್ವಕರ್ಮನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದು ಮುಕುಲ್ ಎಂದು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ದುಷ್ಕರ್ಮಿಗಳು ನೆರೆಹೊರೆಯವರು ಎಂದು ಹರಿದ್ವಾರ ಪೊಲೀಸರು ಬಹಿರಂಗಪಡಿಸಿದ್ದಾರೆ ಮತ್ತು ಮುಕುಲ್ ಅವರ ತಂದೆ ಕೂಡ ರೈಲ್ವೆಯಲ್ಲಿ ಕೆಲಸ ಮಾಡುತ್ತಾರೆ. ಅಪರಾಧದ ನಂತರ, ಇಬ್ಬರು ಹರಿದ್ವಾರ ತಲುಪುವ ಮೊದಲು ಗೋವಾ, ಬೆಂಗಳೂರು, ಮುಂಬೈ, ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರಯಾಣಿಸಿದರು, ಅಲ್ಲಿ ಮುಕುಲ್ “ಹುಡುಗಿಯನ್ನು ಒಬ್ಬಂಟಿಯಾಗಿ ಬಿಟ್ಟು ಓಡಿಹೋಗಿದ್ದಾನೆ ಎಂದು ತಿಳಿಸಿದ್ದಾರೆ.
ಸದ್ಯ ತನ್ನ ತಂದೆ ಮತ್ತು ಸಹೋದರನನ್ನು ಕೊಂದ ಆರೋಪದಲ್ಲಿ ಪರಾರಿಯಾಗಿದ್ದ 15 ವರ್ಷದ ಬಾಲಕಿಯನ್ನು ಉತ್ತರಾಖಂಡದ ಹರಿದ್ವಾರದಲ್ಲಿ ಬಂಧಿಸಲಾಗಿದೆ. ಪ್ರಕರಣದಲ್ಲಿ ಸಹ ಆರೋಪಿಯಾಗಿರುವ ಆಕೆಯ ಸಂಗಾತಿ ಇನ್ನೂ ನಾಪತ್ತೆಯಾಗಿದ್ದಾನೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…