ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

5 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

5 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

17 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

17 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

17 hours ago