ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

3 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

14 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

17 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

17 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

24 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

24 hours ago