ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

9 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago