ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

18 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

22 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago