ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

1 hour ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

3 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

3 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

12 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

23 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

23 hours ago