ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago