ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…

5 hours ago

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…

7 hours ago

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

18 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

19 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

20 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

22 hours ago