ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ ಕಲಾವಿದ ಮತ್ತು ತರಬೇತುದಾರ ಸಿದ್ದು ಬಿರಾದಾರ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯ  ಸಿದ್ದಿಪ್ರಿಯ ವಿನಾಯಕ  15ನೇ ವಾರ್ಷಿಕ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ನಾಡಿನ ಅತ್ಯಂತ  ಪ್ರಾಚೀನ ಕಲೆಗಳಲ್ಲಿ ಗೊಂಬೆಯಾಟಯು ಒಂದಾಗಿದೆ.   ಶಾಸನ, ವಚನಗಳಲ್ಲಿ ಮತ್ತು ದಾಸರ ಹಾಡುಗಳಲ್ಲಿ ಗೊಂಬೆಯಾಟದ ಉಲ್ಲೇಖಗಳಿವೆ.   ಗೊಂಬೆಯಾಟ ಜನಪದ ರಂಗಭೂಮಿಯ ಒಂದು ಚಮತ್ಕಾರಿ ಮತ್ತು ಆಕರ್ಷಕ  ಕಲೆಯಾಗಿದೆ.  ಸೂತ್ರಧಾರ  ತೆರೆಯ ಮರೆಯಲ್ಲೆ ಇದ್ದು ಗೊಂಬೆಗಳಿಂದ ಅಭಿನಯ ಪ್ರದರ್ಶನ ಮಾಡುವ ವಿಶೇಷ ಕಲಾ ಪ್ರಕಾರವಾಗಿದೆ ಎಂದರು.

ವಿಶೇಷ ಗೊಂಬೆಯಾಟ ಪ್ರದರ್ಶನ :

ಸೋಮೇಶ್ವರ ಬಡಾವಣೆಯ ಸಿದ್ದಿಪ್ರಿಯ ವಿನಾಯಕ 15 ನೇ ವಾರ್ಷಿಕೋತ್ಸವ ಅಂಗವಾಗಿ  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲ್ಲೂಕಿನ ಹೊಂಗಿರಣ ಗೊಂಬೆಯಾಟ ತಂಡದ ಕಲಾವಿದರು ನಡೆಸಿಕೊಟ್ಟ ಪ್ರದರ್ಶನ ಪ್ರೇಕ್ಷಕರಿಗೆ ಆಕರ್ಷಣೆಯಾಗಿತ್ತು.  ರಾಮಾಯಣದ  ಸೀತಾಪಹರಣ ಪ್ರಸಂಗ,  ಮಹಾಭಾರತದ ಏಕಲವ್ಯ ಪ್ರಸಂಗ, ಐತಿಹಾಸಿಕವಾದ ಸಂಗೊಳ್ಳಿ ರಾಯಣ್ಣ ಪ್ರಸಂಗ, ಸಮಾಜಕ್ಕೆ ಶರಣರ ಕೊಡುಗೆ, ಮಕ್ಕಳ ಹಾಡುಗಳು ಸೇರಿದಂತೆ ಹಲವಾರು ಗೊಂಬೆಯಾಟದ ಪ್ರಸಂಗಗಳು ಮೆಚ್ಚುಗೆ ಪಡೆದವರು.

ಹೊಂಗಿರಣ ಗೊಂಬೆಯಾಟ ಕಲಾ ತಂಡದ ಸಿದ್ದು ಬಿರಾದಾರ, ಸೂರಜ್, ವಿಜಯ ಕುಮಾರ್, ಪ್ರಜ್ವಲ್, ಅಕ್ಷತ್, ಗಣಪತಿ, ನಾರಾಯಣ್, ಓಂಕಾರ್ ಕಲಾವಿದರು ಗೊಂಬೆಯಾಟ ಪ್ರದರ್ಶನ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ    ವಡ್ಡರಹಳ್ಳಿ ರವಿಕುಮಾರ್, ನಗರಸಭಾ ಸದಸ್ಯ ಪದ್ಮನಾಭ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಹಾಲಿಂಗಯ್ಯ, ಸಿದ್ದಿಪ್ರಿಯ ವಿನಾಯಕ ಮಂಡಲಿಯ ವಿಶ್ವೇಶ್ವರಯ್ಯ, ಸೋಮಣ್ಣ, ಆನಂದ್, ಮನೋಹರ್, ಚೇತನ್, ವಿನೋದ್, ಚಂದನ್, ನವೀನ್, ಮಂಜುನಾಥ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

41 minutes ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

51 minutes ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

12 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

12 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

14 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

17 hours ago