ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಬೋಯಿಂಗ್ ಸಂಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟ‌ರ್ ಮತ್ತು ಹಿರಿಯ ತಂತ್ರಜ್ಞೆ ಡಾ. ಸೀಮಾ ಚೋಪ್ರಾ ತಿಳಿಸಿದರು.

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಗೀತಮ್ ವಿಶ್ವವಿದ್ಯಾಲಯದಲ್ಲಿಂದು (ಡೀಮ್ಡ್ ಯೂನಿವರ್ಸಿಟಿ) ಪದವಿಪೂರ್ವ, ಸ್ನಾತಕೋತ್ತರ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದಲ್ಲಿ ನಿರಂತರ ಕಲಿಕೆ, ಸ್ಪಷ್ಟ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕ. ಜೊತೆಗೆ ನಿಮ್ಮ ಸ್ನೇಹಿತರು ಮತ್ತು ಸಹಪಾಠಿಗಳಿಗೆ ಪ್ರಮುಖ್ಯತೆ ನೀಡಿ  ಹಾಗೂ ಮುಂದೆ ಕೆಲಸದ ಒತ್ತಡ ಎಷ್ಟೇ ಇದ್ದರು ಸದಾ ಕುಟುಂಬಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.

ಬೆಂಗಳೂರಿನ ಗೀತಮ್ ವಿಶ್ವವಿದ್ಯಾನಿಲಯದ  ಉಪಕುಲಪತಿ ಪ್ರೊ. ಕೆಎನ್‌ಎಸ್ ಆಚಾರ್ಯ ಮಾತನಾಡಿ,  ‘ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ಶಿಕ್ಷಣವನ್ನು ಸಾಮಾಜಿಕ, ವಾಸ್ತವಿಕತೆ ಜೊತೆಗೆ ಸಂಯೋಜಿತಗೊಳಿಸಿ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ದಿಕ್ಕಿನೆಡೆಗೆ ಸಾಗುತ್ತಿದ್ದೇವೆ. ಗೀತಮ್ ವಿಶ್ವವಿದ್ಯಾನಿಲಯದ ಕೋರ್ಸ್ ಗಳನ್ನು ಉದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಸಲಾಗಿದ್ದು, ವಾಸ್ತವ ಪ್ರಪಂಚದ ಸಮಸ್ಯೆಗಳಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಮ್ಮ ಸಂಶೋಧನೆಗಳು ನಡೆಯುತ್ತವೆ ಎಂದರು.

ನಮ್ಮ ವಿದ್ಯಾರ್ಥಿಗಳನ್ನು ನಿರ್ದಿಷ್ಟ ಉದ್ದೇಶದ ಹಿನ್ನೆಲೆಯಲ್ಲಿ ಯೋಚಿಸಲು, ಅದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಾಗುತ್ತದೆ. ಈ ಸಮಾರಂಭವು ಕೇವಲ ಕೋರ್ಸ್ ನ ಅಂತ್ಯ ಮಾತ್ರವೇ ಅಲ್ಲ ಹೊಸ ಜವಾಬ್ದಾರಿಯ ಆರಂಭವಾಗಿದೆ. ಜ್ಞಾನವನ್ನು ಸಮಗ್ರತೆಯೊಂದಿಗೆ ಅನ್ವಯಿಸುವ, ಸದಾ ಕುತೂಹಲದಿಂದಿರುವ ಮತ್ತು ಪ್ರಪಂಚದಲ್ಲಿ ಅರ್ಥಪೂರ್ಣ ವ್ಯತ್ಯಾಸವನ್ನು ತರುವ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಹೊರಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.

1,310 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 1,310 ಮಂದಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದರಲ್ಲಿ 1,239 ಮಂದಿ ಪದವಿ, 54 ಮಂದಿ ಸ್ನಾತಕೋತ್ತರ ಪದವಿ ಮತ್ತು 17 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ತಮ್ಮ ಕೋರ್ಸ್ ಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಗಳಿಸಿದ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಗೀತಮ್ ಸ್ಕೂಲ್ ಆಫ್ ಬಿಸಿನೆಸ್ ನ ಅಸೋಸಿಯೇಟ್ ಪ್ರೊಫೆಸರ್ ಡಾ. ಜಿ. ಪಿ. ಸೆಂಥಿಲ್ ಕುಮಾರ್ ಅವರಿಗೆ ಅಕೌಂಟಿಂಗ್, ಫೈನಾನ್ಸ್ ಮತ್ತು ಅಪ್ಲೆಡ್ ಬಿಸಿನೆಸ್ ವಿಭಾಗದಲ್ಲಿ ನಡೆಸಿದ ಅದ್ಭುತ ಸಂಶೋಧನ ಕಾರ್ಯಕ್ಕಾಗಿ ಶ್ರೇಷ್ಠ ಸಂಶೋಧಕ ಪ್ರಶಸ್ತಿಯನ್ನು ನೀಡಲಾಯಿತು.

ಕೋರ್ಸ್ ಮುಗಿಸಿ ಪದವಿ ಪಡೆದ ವಿದ್ಯಾರ್ಥಿಗಳು ಮಾತನಾಡಿ, ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ವ್ಯಾಸಂಗ ಮಾಡಿ ಪದವಿ ಪಡೆದಿದ್ದೇವೆ ಎಂಬುದರ ಬಗ್ಗೆ ನಮಗೆ ಹೆಮ್ಮೆ ಇದೆ. ಉತ್ತಮ ವಾತಾವರಣದಲ್ಲಿ ನಮ್ಮ ಕೋರ್ಸ್ ಮುಗಿಸಿದ್ದೇವೆ. ನಮ್ಮ ಸಂಸ್ಥೆಯ ಮೇಲೆ ನಮಗೆ ಅಪಾರವಾದ ಗೌರವವಿದೆ. ನಮ್ಮ ಕಲಿಕೆ ಅತ್ಯುತ್ತಮವಾಗಲು ನಮ್ಮ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ನೀಡಿರುವ ಸಹಕಾರ ಮರೆಯಲು ಅಸಾಧ್ಯ, ನಮಗೆ ಶುಭ ಕೋರಿ ಪದವಿ ಪ್ರದಾನ ಮಾಡಲು  ಹಲವು ಗಣ್ಯರು ಆಗಮಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ಎರೋಲ್ ಡಿ’ಸೋಜಾ, ಮುಖ್ಯ ಅತಿಥಿ ಡಾ. ಸೀಮಾ ಚೋಪ್ರಾ, ಗೀತಂನ ಅಧ್ಯಕ್ಷ ಎಂ. ಭರತ್, ಉಪಾಧ್ಯಕ್ಷ ಪ್ರೊ. ಎಂ.ಗಂಗಾಧರ ರಾವ್, ಆಡಳಿತ ಮಂಡಳಿಯ ಸದಸ್ಯರು ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು, ಅಸೋಸಿಯೇಟ್ ಡೀನ್‌ಗಳು, ಸಂಸ್ಥೆಗಳ ಮುಖ್ಯಸ್ಥರು, ರಿಜಿಸ್ಟ್ರಾರ್, ಕ್ರಿಯಾತ್ಮಕ ನಿರ್ದೇಶಕರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

Ramesh Babu

Journalist

Recent Posts

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

6 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

10 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

13 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

14 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 day ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

1 day ago