ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಬೋಯಿಂಗ್ ಸಂಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟ‌ರ್ ಮತ್ತು ಹಿರಿಯ ತಂತ್ರಜ್ಞೆ ಡಾ. ಸೀಮಾ ಚೋಪ್ರಾ ತಿಳಿಸಿದರು.

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಗೀತಮ್ ವಿಶ್ವವಿದ್ಯಾಲಯದಲ್ಲಿಂದು (ಡೀಮ್ಡ್ ಯೂನಿವರ್ಸಿಟಿ) ಪದವಿಪೂರ್ವ, ಸ್ನಾತಕೋತ್ತರ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದಲ್ಲಿ ನಿರಂತರ ಕಲಿಕೆ, ಸ್ಪಷ್ಟ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕ. ಜೊತೆಗೆ ನಿಮ್ಮ ಸ್ನೇಹಿತರು ಮತ್ತು ಸಹಪಾಠಿಗಳಿಗೆ ಪ್ರಮುಖ್ಯತೆ ನೀಡಿ  ಹಾಗೂ ಮುಂದೆ ಕೆಲಸದ ಒತ್ತಡ ಎಷ್ಟೇ ಇದ್ದರು ಸದಾ ಕುಟುಂಬಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.

ಬೆಂಗಳೂರಿನ ಗೀತಮ್ ವಿಶ್ವವಿದ್ಯಾನಿಲಯದ  ಉಪಕುಲಪತಿ ಪ್ರೊ. ಕೆಎನ್‌ಎಸ್ ಆಚಾರ್ಯ ಮಾತನಾಡಿ,  ‘ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ಶಿಕ್ಷಣವನ್ನು ಸಾಮಾಜಿಕ, ವಾಸ್ತವಿಕತೆ ಜೊತೆಗೆ ಸಂಯೋಜಿತಗೊಳಿಸಿ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ದಿಕ್ಕಿನೆಡೆಗೆ ಸಾಗುತ್ತಿದ್ದೇವೆ. ಗೀತಮ್ ವಿಶ್ವವಿದ್ಯಾನಿಲಯದ ಕೋರ್ಸ್ ಗಳನ್ನು ಉದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಸಲಾಗಿದ್ದು, ವಾಸ್ತವ ಪ್ರಪಂಚದ ಸಮಸ್ಯೆಗಳಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಮ್ಮ ಸಂಶೋಧನೆಗಳು ನಡೆಯುತ್ತವೆ ಎಂದರು.

ನಮ್ಮ ವಿದ್ಯಾರ್ಥಿಗಳನ್ನು ನಿರ್ದಿಷ್ಟ ಉದ್ದೇಶದ ಹಿನ್ನೆಲೆಯಲ್ಲಿ ಯೋಚಿಸಲು, ಅದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಾಗುತ್ತದೆ. ಈ ಸಮಾರಂಭವು ಕೇವಲ ಕೋರ್ಸ್ ನ ಅಂತ್ಯ ಮಾತ್ರವೇ ಅಲ್ಲ ಹೊಸ ಜವಾಬ್ದಾರಿಯ ಆರಂಭವಾಗಿದೆ. ಜ್ಞಾನವನ್ನು ಸಮಗ್ರತೆಯೊಂದಿಗೆ ಅನ್ವಯಿಸುವ, ಸದಾ ಕುತೂಹಲದಿಂದಿರುವ ಮತ್ತು ಪ್ರಪಂಚದಲ್ಲಿ ಅರ್ಥಪೂರ್ಣ ವ್ಯತ್ಯಾಸವನ್ನು ತರುವ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಹೊರಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.

1,310 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 1,310 ಮಂದಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದರಲ್ಲಿ 1,239 ಮಂದಿ ಪದವಿ, 54 ಮಂದಿ ಸ್ನಾತಕೋತ್ತರ ಪದವಿ ಮತ್ತು 17 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ತಮ್ಮ ಕೋರ್ಸ್ ಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಗಳಿಸಿದ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಗೀತಮ್ ಸ್ಕೂಲ್ ಆಫ್ ಬಿಸಿನೆಸ್ ನ ಅಸೋಸಿಯೇಟ್ ಪ್ರೊಫೆಸರ್ ಡಾ. ಜಿ. ಪಿ. ಸೆಂಥಿಲ್ ಕುಮಾರ್ ಅವರಿಗೆ ಅಕೌಂಟಿಂಗ್, ಫೈನಾನ್ಸ್ ಮತ್ತು ಅಪ್ಲೆಡ್ ಬಿಸಿನೆಸ್ ವಿಭಾಗದಲ್ಲಿ ನಡೆಸಿದ ಅದ್ಭುತ ಸಂಶೋಧನ ಕಾರ್ಯಕ್ಕಾಗಿ ಶ್ರೇಷ್ಠ ಸಂಶೋಧಕ ಪ್ರಶಸ್ತಿಯನ್ನು ನೀಡಲಾಯಿತು.

ಕೋರ್ಸ್ ಮುಗಿಸಿ ಪದವಿ ಪಡೆದ ವಿದ್ಯಾರ್ಥಿಗಳು ಮಾತನಾಡಿ, ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ವ್ಯಾಸಂಗ ಮಾಡಿ ಪದವಿ ಪಡೆದಿದ್ದೇವೆ ಎಂಬುದರ ಬಗ್ಗೆ ನಮಗೆ ಹೆಮ್ಮೆ ಇದೆ. ಉತ್ತಮ ವಾತಾವರಣದಲ್ಲಿ ನಮ್ಮ ಕೋರ್ಸ್ ಮುಗಿಸಿದ್ದೇವೆ. ನಮ್ಮ ಸಂಸ್ಥೆಯ ಮೇಲೆ ನಮಗೆ ಅಪಾರವಾದ ಗೌರವವಿದೆ. ನಮ್ಮ ಕಲಿಕೆ ಅತ್ಯುತ್ತಮವಾಗಲು ನಮ್ಮ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ನೀಡಿರುವ ಸಹಕಾರ ಮರೆಯಲು ಅಸಾಧ್ಯ, ನಮಗೆ ಶುಭ ಕೋರಿ ಪದವಿ ಪ್ರದಾನ ಮಾಡಲು  ಹಲವು ಗಣ್ಯರು ಆಗಮಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ಎರೋಲ್ ಡಿ’ಸೋಜಾ, ಮುಖ್ಯ ಅತಿಥಿ ಡಾ. ಸೀಮಾ ಚೋಪ್ರಾ, ಗೀತಂನ ಅಧ್ಯಕ್ಷ ಎಂ. ಭರತ್, ಉಪಾಧ್ಯಕ್ಷ ಪ್ರೊ. ಎಂ.ಗಂಗಾಧರ ರಾವ್, ಆಡಳಿತ ಮಂಡಳಿಯ ಸದಸ್ಯರು ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು, ಅಸೋಸಿಯೇಟ್ ಡೀನ್‌ಗಳು, ಸಂಸ್ಥೆಗಳ ಮುಖ್ಯಸ್ಥರು, ರಿಜಿಸ್ಟ್ರಾರ್, ಕ್ರಿಯಾತ್ಮಕ ನಿರ್ದೇಶಕರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

6 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

2 days ago