ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

“ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ, ಎದುರಾಗುವ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮುಂದೆ ಸಾಗುವುದರಿಂದ ಸಮಾಜದಲ್ಲಿ ಮನ್ನಣೆ ಮತ್ತು ಪುರಸ್ಕಾರಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ ಎಂದು ಬೋಯಿಂಗ್ ಸಂಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (AI) ವಿಭಾಗದ ಎಕ್ಸಿಕ್ಯೂಟಿವ್ ಡೈರೆಕ್ಟ‌ರ್ ಮತ್ತು ಹಿರಿಯ ತಂತ್ರಜ್ಞೆ ಡಾ. ಸೀಮಾ ಚೋಪ್ರಾ ತಿಳಿಸಿದರು.

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಗೀತಮ್ ವಿಶ್ವವಿದ್ಯಾಲಯದಲ್ಲಿಂದು (ಡೀಮ್ಡ್ ಯೂನಿವರ್ಸಿಟಿ) ಪದವಿಪೂರ್ವ, ಸ್ನಾತಕೋತ್ತರ, ಪಿಎಚ್ಡಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ತಮ್ಮ ವೃತ್ತಿಜೀವನದಲ್ಲಿ ನಿರಂತರ ಕಲಿಕೆ, ಸ್ಪಷ್ಟ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿ ಅವಶ್ಯಕ. ಜೊತೆಗೆ ನಿಮ್ಮ ಸ್ನೇಹಿತರು ಮತ್ತು ಸಹಪಾಠಿಗಳಿಗೆ ಪ್ರಮುಖ್ಯತೆ ನೀಡಿ  ಹಾಗೂ ಮುಂದೆ ಕೆಲಸದ ಒತ್ತಡ ಎಷ್ಟೇ ಇದ್ದರು ಸದಾ ಕುಟುಂಬಕ್ಕೆ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.

ಬೆಂಗಳೂರಿನ ಗೀತಮ್ ವಿಶ್ವವಿದ್ಯಾನಿಲಯದ  ಉಪಕುಲಪತಿ ಪ್ರೊ. ಕೆಎನ್‌ಎಸ್ ಆಚಾರ್ಯ ಮಾತನಾಡಿ,  ‘ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ಶಿಕ್ಷಣವನ್ನು ಸಾಮಾಜಿಕ, ವಾಸ್ತವಿಕತೆ ಜೊತೆಗೆ ಸಂಯೋಜಿತಗೊಳಿಸಿ ಶಿಕ್ಷಣ ವ್ಯವಸ್ಥೆಯನ್ನು ಮರುರೂಪಿಸುವ ದಿಕ್ಕಿನೆಡೆಗೆ ಸಾಗುತ್ತಿದ್ದೇವೆ. ಗೀತಮ್ ವಿಶ್ವವಿದ್ಯಾನಿಲಯದ ಕೋರ್ಸ್ ಗಳನ್ನು ಉದ್ಯಮದ ಸಹಯೋಗದೊಂದಿಗೆ ವಿನ್ಯಾಸಗೊಳಸಲಾಗಿದ್ದು, ವಾಸ್ತವ ಪ್ರಪಂಚದ ಸಮಸ್ಯೆಗಳಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ನಮ್ಮ ಸಂಶೋಧನೆಗಳು ನಡೆಯುತ್ತವೆ ಎಂದರು.

ನಮ್ಮ ವಿದ್ಯಾರ್ಥಿಗಳನ್ನು ನಿರ್ದಿಷ್ಟ ಉದ್ದೇಶದ ಹಿನ್ನೆಲೆಯಲ್ಲಿ ಯೋಚಿಸಲು, ಅದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಾಗುತ್ತದೆ. ಈ ಸಮಾರಂಭವು ಕೇವಲ ಕೋರ್ಸ್ ನ ಅಂತ್ಯ ಮಾತ್ರವೇ ಅಲ್ಲ ಹೊಸ ಜವಾಬ್ದಾರಿಯ ಆರಂಭವಾಗಿದೆ. ಜ್ಞಾನವನ್ನು ಸಮಗ್ರತೆಯೊಂದಿಗೆ ಅನ್ವಯಿಸುವ, ಸದಾ ಕುತೂಹಲದಿಂದಿರುವ ಮತ್ತು ಪ್ರಪಂಚದಲ್ಲಿ ಅರ್ಥಪೂರ್ಣ ವ್ಯತ್ಯಾಸವನ್ನು ತರುವ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳು ಹೊರಟಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹೇಳಿದರು.

1,310 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪದವಿ ಪ್ರದಾನ ಸಮಾರಂಭದಲ್ಲಿ ಒಟ್ಟು 1,310 ಮಂದಿಗೆ ಪದವಿಗಳನ್ನು ಪ್ರದಾನ ಮಾಡಲಾಯಿತು. ಇದರಲ್ಲಿ 1,239 ಮಂದಿ ಪದವಿ, 54 ಮಂದಿ ಸ್ನಾತಕೋತ್ತರ ಪದವಿ ಮತ್ತು 17 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ತಮ್ಮ ಕೋರ್ಸ್ ಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಗಳಿಸಿದ 18 ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಗೀತಮ್ ಸ್ಕೂಲ್ ಆಫ್ ಬಿಸಿನೆಸ್ ನ ಅಸೋಸಿಯೇಟ್ ಪ್ರೊಫೆಸರ್ ಡಾ. ಜಿ. ಪಿ. ಸೆಂಥಿಲ್ ಕುಮಾರ್ ಅವರಿಗೆ ಅಕೌಂಟಿಂಗ್, ಫೈನಾನ್ಸ್ ಮತ್ತು ಅಪ್ಲೆಡ್ ಬಿಸಿನೆಸ್ ವಿಭಾಗದಲ್ಲಿ ನಡೆಸಿದ ಅದ್ಭುತ ಸಂಶೋಧನ ಕಾರ್ಯಕ್ಕಾಗಿ ಶ್ರೇಷ್ಠ ಸಂಶೋಧಕ ಪ್ರಶಸ್ತಿಯನ್ನು ನೀಡಲಾಯಿತು.

ಕೋರ್ಸ್ ಮುಗಿಸಿ ಪದವಿ ಪಡೆದ ವಿದ್ಯಾರ್ಥಿಗಳು ಮಾತನಾಡಿ, ಬೆಂಗಳೂರು ಗೀತಮ್ ವಿಶ್ವವಿದ್ಯಾನಿಲಯದಲ್ಲಿ ನಾವು ವ್ಯಾಸಂಗ ಮಾಡಿ ಪದವಿ ಪಡೆದಿದ್ದೇವೆ ಎಂಬುದರ ಬಗ್ಗೆ ನಮಗೆ ಹೆಮ್ಮೆ ಇದೆ. ಉತ್ತಮ ವಾತಾವರಣದಲ್ಲಿ ನಮ್ಮ ಕೋರ್ಸ್ ಮುಗಿಸಿದ್ದೇವೆ. ನಮ್ಮ ಸಂಸ್ಥೆಯ ಮೇಲೆ ನಮಗೆ ಅಪಾರವಾದ ಗೌರವವಿದೆ. ನಮ್ಮ ಕಲಿಕೆ ಅತ್ಯುತ್ತಮವಾಗಲು ನಮ್ಮ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ನೀಡಿರುವ ಸಹಕಾರ ಮರೆಯಲು ಅಸಾಧ್ಯ, ನಮಗೆ ಶುಭ ಕೋರಿ ಪದವಿ ಪ್ರದಾನ ಮಾಡಲು  ಹಲವು ಗಣ್ಯರು ಆಗಮಿಸಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ಎರೋಲ್ ಡಿ’ಸೋಜಾ, ಮುಖ್ಯ ಅತಿಥಿ ಡಾ. ಸೀಮಾ ಚೋಪ್ರಾ, ಗೀತಂನ ಅಧ್ಯಕ್ಷ ಎಂ. ಭರತ್, ಉಪಾಧ್ಯಕ್ಷ ಪ್ರೊ. ಎಂ.ಗಂಗಾಧರ ರಾವ್, ಆಡಳಿತ ಮಂಡಳಿಯ ಸದಸ್ಯರು ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು, ಅಸೋಸಿಯೇಟ್ ಡೀನ್‌ಗಳು, ಸಂಸ್ಥೆಗಳ ಮುಖ್ಯಸ್ಥರು, ರಿಜಿಸ್ಟ್ರಾರ್, ಕ್ರಿಯಾತ್ಮಕ ನಿರ್ದೇಶಕರು, ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

Ramesh Babu

Journalist

Recent Posts

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

10 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

10 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

15 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

21 hours ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

22 hours ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…

1 day ago