ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ


ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ ಬಳಸಲಾಗಿದ್ದ ಹೈಟೆಕ್ ಕಳ್ಳಸಾಗಣೆ ತಂತ್ರ ಬೆಳಕಿಗೆ ಬಂದಿದೆ.

ಖಚಿತ ಮಾಹಿತಿಯ ಮೇರೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ಟೋಲ್ ಸಮೀಪ ದಾಳಿ ನಡೆಸಿದ ಪೊಲೀಸರು, ಎರೆಹುಳು ಗೊಬ್ಬರ ಸಾಗಿಸುತ್ತಿದ್ದ ಲಾರಿಯನ್ನು ತಪಾಸಣೆಗೆ ಒಳಪಡಿಸಿದರು. ಆರಂಭದಲ್ಲಿ ಲಾರಿಯಲ್ಲಿ ಗೊಬ್ಬರ ಮಾತ್ರ ಇದೆ ಎಂದು ಚಾಲಕರು ಹೇಳಿದರೂ, ಅನುಮಾನಗೊಂಡ ಪೊಲೀಸರು ಗೊಬ್ಬರದ ಚೀಲಗಳನ್ನು ತೆರವುಗೊಳಿಸಿ ಪರಿಶೀಲಿಸಿದಾಗ ಅವುಗಳ ಕೆಳಭಾಗದಲ್ಲಿ ಗೋವಾ ಮದ್ಯದ ಬಾಕ್ಸ್‌ಗಳನ್ನು ಅತ್ಯಂತ ಚಾಕಚಕ್ಯತೆಯಿಂದ ಅಡಗಿಸಿಡಲಾಗಿರುವುದು ಪತ್ತೆಯಾಯಿತು.

ಹೈಟೆಕ್ ತಂತ್ರದಿಂದ ಸಾಗಾಟ

ತನಿಖೆ ವೇಳೆ ಅಕ್ರಮ ಮದ್ಯ ಸಾಗಾಟಕ್ಕಾಗಿ ಆರೋಪಿಗಳು ವಿಶೇಷ ತಂತ್ರ ರೂಪಿಸಿರುವುದು ಬೆಳಕಿಗೆ ಬಂದಿದೆ. ಪೊಲೀಸರ ಕಣ್ತಪ್ಪಿಸಲು ಪ್ರತಿ ಚಾಲಕನಿಗೆ ಕೇವಲ ಒಂದು ನಿರ್ದಿಷ್ಟ ಜಿಪಿಎಸ್ ಲೊಕೇಶನ್ ಮಾತ್ರ ನೀಡಲಾಗುತ್ತಿತ್ತು. ಆ ಸ್ಥಳ ತಲುಪಿದ ಬಳಿಕ ಮತ್ತೊಬ್ಬ ಚಾಲಕ ವಾಹನದ ನಿಯಂತ್ರಣ ವಹಿಸಿಕೊಳ್ಳುತ್ತಿದ್ದ. ಹೀಗೆ ಹಂತ ಹಂತವಾಗಿ ಚಾಲಕರನ್ನು ಬದಲಾಯಿಸುತ್ತಾ ಲಾರಿಯನ್ನು ಗೋವಾದಿಂದ ಮಹಾರಾಷ್ಟ್ರದತ್ತ ಸಾಗಿಸಲಾಗುತ್ತಿತ್ತು.

ಈ ವಿಧಾನದಿಂದ ಲಾರಿ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳನ್ನು ದಾಟಿ ವಿಜಯಪುರ ತಲುಪಿತ್ತು. ಆದರೆ ವಿಜಯಪುರ ಪೊಲೀಸರ ಕಾರ್ಯಾಚರಣೆಯಿಂದ ಅಕ್ರಮ ದಂಧೆ ಬಯಲಾಗಿದೆ.

₹1.65 ಕೋಟಿ ಮೌಲ್ಯದ ಮದ್ಯ ಜಪ್ತಿ

ಪೊಲೀಸರು ಲಾರಿಯಿಂದ 12,952 ಲೀಟರ್‌ಗೂ ಅಧಿಕ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಮದ್ಯದಲ್ಲಿ 290 ಬಾಕ್ಸ್ ಮ್ಯಾನ್ಷನ್ ಹೌಸ್ ಬ್ರಾಂಡಿ, 397 ಬಾಕ್ಸ್ ರಾಯಲ್ ಬ್ಲೂ ಹಾಗೂ 800 ಬಾಕ್ಸ್ ರಾಯಲ್ ಸೆಲೆಕ್ಟ್ ಮದ್ಯ ಸೇರಿವೆ. ಮದ್ಯ ಹಾಗೂ ಲಾರಿ ಸೇರಿ ಒಟ್ಟು ₹1.65 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ನಾಲ್ವರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಮೂಲದ ಶ್ರೀನಿವಾಸ್ ಮೀಸಿ, ವಿಜಯಪುರದ ಹುಸೇನ್‌ಸಾಬ ಮುಲ್ಲಾ, ಬಸವರಾಜ್ ಭಜಂತ್ರಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಸಿದ್ಧರಾಮ ಡಾಲೆ ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮದ್ಯ ಮಾಫಿಯಾ ಜಾಲವನ್ನು ಭೇದಿಸಿರುವ ವಿಜಯಪುರ ಪೊಲೀಸರು, ಈ ಕಳ್ಳಸಾಗಣೆ ಜಾಲದ ಪ್ರಮುಖ ಕಿಂಗ್‌ಪಿನ್ ಹಾಗೂ ಇತರ ಆರೋಪಿಗಳ ಪತ್ತೆಗೆ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago