ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ತಿಳಿಸಿದರು.
ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು ಎಂದರು.
ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.
ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್ಡಿಪಿ ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಹೇಳಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…