Categories: ಮೈಸೂರು

ಗೋಡಾ ಹೈ – ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ- ಸಿಎಂ‌ ಸಿದ್ದರಾಮಯ್ಯ

ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದು ತಿಳಿಸಿದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು. ನಮ್ಮ ಸಂವಿಧಾನವು ಜಾತ್ಯತೀತ ಮತ್ತು ಧರ್ಮಾತೀತವಾದುದ್ದು. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು ಎಂದರು.

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬರಬೇಕು, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಹೇಳಿದರು.

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ? ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ಜನರ ತಲಾದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಎಸ್‌ಡಿಪಿ ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಹೇಳಿದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

19 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago