ಗೋಮಯ ಗಣೇಶ: ಸಂಪೂರ್ಣ ಗೋವಿನ(ಹಸು) ಸಗಣಿಯಿಂದಲೇ ಗಣಪತಿ ತಯಾರಿ: ಅದು ಎಲ್ಲಿ ತಯಾರಿ ಆಗುತ್ತೆ, ಇದರ ಉಪಯೋಗ ಏನು ಅಂತೀರಾ….? ಇಲ್ಲಿದೆ ಮಾಹಿತಿ‌ ಓದಿ……

ಗೌರಿ ಗಣೇಶ ಹಬ್ಬಕ್ಕೆ‌ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಮನೆಯಲ್ಲಿ ಗಣೇಶ ಕೂರಿಸಲು ಈಗಾಗಲೇ ಎಲ್ಲಾ‌ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಅದರಲ್ಲೂ ಪಿಓಪಿ ಗಣೇಶ ಹೊರತುಪಡಿಸಿ ಮಣ್ಣಿನ ಗಣೇಶ ಸೇರಿ ಪರಿಸರ ಸ್ನೇಹಿ ಗಣಪತಿ ಕಡೆಗೆ ಜನ ಮನಸ್ಸು ಮಾಡುತ್ತಿದ್ದಾರೆ.

ಈ ಹಿನ್ನೆಲೆ ಮಾರುಕಟ್ಟೆಗೆ ಸಗಣಿ ಗಣಪ ಎಂಟ್ರಿ ಕೊಟ್ಟಿದ್ದು, ಜನ ಈ ಗಣೇಶ ಕೊಳ್ಳಲು ಈಗಾಗಲೇ ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದಾರೆ. ಏನಿದು ಸಗಣಿ ಗಣಪ, ಇದು ಸಿಗುವುದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ……………

ಹಸುವಿನ ಸಗಣಿಯಿಂದ ಮಾಡಿದ ಗಣೇಶನ ವಿಗ್ರಹವೇ ಗೋಮಯ ಗಣೇಶ. ಸಂಪೂರ್ಣವಾಗಿ ನೈಸರ್ಗಿಕ ವಸ್ತುಗಳಿಂದ ಮಾಡಲ್ಪಟ್ಟಿರುತ್ತದೆ ಮತ್ತು ಯಾವುದೇ ರಾಸಾಯನಿಕ ಬಣ್ಣಗಳನ್ನು ಅಥವಾ ವಸ್ತುಗಳನ್ನು ಬಳಸುವುದಿಲ್ಲ. ಇದು ಪರಿಸರ ಸ್ನೇಹಿ ಮತ್ತು ನೈಸರ್ಗಿಕ ವಸ್ತುವಿನಿಂದ ತಯಾರಿಸಲ್ಪಟ್ಟಿರುವುದರಿಂದ ಪೂಜೆಯ ನಂತರ ಸುಲಭವಾಗಿ ಮಣ್ಣಿನಲ್ಲಿ ಕರಗಿ ಹೋಗುತ್ತದೆ. ನಂತರ ಗೊಬ್ಬರವಾಗಿ ಬಳಸಬಹುದು. ಇದು ಪರಿಸರಕ್ಕೆ ಹಾನಿಕಾರಕವಲ್ಲ ಮತ್ತು ಪೂಜೆಗೆ ಸೂಕ್ತವಾದ ವಸ್ತುವಾಗಿದೆ.

ಕೆಲವರು ಗೋಮಯ ಗಣೇಶನ ವಿಗ್ರಹವು ಮನೆಯಲ್ಲಿ ಧನಾತ್ಮಕ ಶಕ್ತಿ ಮತ್ತು ಸಂತೋಷವನ್ನು ತರುತ್ತದೆ ಎಂದು ನಂಬುತ್ತಾರೆ.

ಹಸುವಿನ ಸಗಣಿಯಲ್ಲಿ ಲಕ್ಷ್ಮಿ ದೇವಿಯ ವಾಸವಿರುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹೀಗಾಗಿ, ಗೋಮಯ ಗಣೇಶನನ್ನು ಪೂಜಿಸುವುದರಿಂದ ಮನೆಯಲ್ಲಿ ಸಮೃದ್ಧಿ ಮತ್ತು ಸಂತೋಷ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಇತ್ತೀಚಿನ ದಿನಗಳಲ್ಲಿ, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡುತ್ತಿರುವ ಹಿನ್ನೆಲೆಯಲ್ಲಿ ಗೋಮಯ ಗಣೇಶನ ವಿಗ್ರಹಗಳು ಹೆಚ್ಚು ಜನಪ್ರಿಯವಾಗುತ್ತಿವೆ.

ಹೌದು, ಸಗಣಿ ಮುದ್ದೆಯಿಂದ ಗಣೇಶನ ಪ್ರತಿಮೆ ಮಾಡುತ್ತಿರುವ ಮಹಿಳೆಯರು, ಗಣಪನಿಗೆ ಹಸುವಿನ ಗಂಜಲದಿಂದ ಲೇಪನ ಮಾಡುತ್ತಿರುವ ವ್ಯಕ್ತಿ, ಉಜ್ಜುವ ವಸ್ತುವಿನಿಂದ ಗಣಪನಿಗೆ ಫೈನಲ್ ಟಚ್ ಕೊಡುತ್ತಿರುವ ಕೆಲಸಗಾರ,. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯದ ಪಕ್ಕದಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ.

ಗೋಶಾಲೆಯಲ್ಲಿರುವ ನೂರಾರು ಗೋವುಗಳ(ಹಸುಗಳ) ಸಗಣಿಯನ್ನು ಒಣಗಿಸಿ ಪುಡಿ ಮಾಡಿದ ನಂತರ, ಗಮ್ ರೀತಿಯ ವಸ್ತುವನ್ನ ಬಳಸಿ, ಒಂದು ರೀತಿಯ ಮುದ್ದೆ ಆಕಾರದಲ್ಲಿ ಅದನ್ನ ತಯಾರಿಸಿ, ಗಣೇಶ ಆಕೃತಿಯ ಅಚ್ಚುಗಳಿಗೆ ಸಗಣಿ ಹಾಕಲಾಗುತ್ತದೆ. ನಂತರ ಕೈಯಿಂದ ಸಂಪೂರ್ಣವಾಗಿ ಅವುಗಳನ್ನು ಆಕಾರ ಮಾಡಿ, ನಂತರ ಗಂಜಲದಿಂದ ಲೇಪನ ಮಾಡುತ್ತಾರೆ. ಎರಡು ಮೂರು ದಿನ ಒಣಗಿ ನಂತರ ಪರಿಸರಕ್ಕೆ ಹೊಂದಿಕೊಳ್ಳುವ ಬಣ್ಣವನ್ನ ಮಾಡುತ್ತಾರೆ.

ಹೀಗೆ ಸಂಪೂರ್ಣ ವಾಗಿ ಸಗಣಿಯಿಂದ ಮಾಡುವ ಗಣಪನಿಗೆ ಬಾರಿ ಬೇಡಿಕೆ ಇದೆ. ಇವುಗಳು ಮನೆಯಲ್ಲಿ ಇಡಲು ತುಂಬಾ ಅನುಕೂಲ. ಅರ್ಧ ಅಡಿಯಿಂದ ಹಿಡಿದು ಒಂದು ಅಡಿಯವರೆಗೆ ಸಗಣಿ ಗಣಪತಿ ಸಿಗುತ್ತವೆ. ಹಣದಲ್ಲೂ ಕೂಡ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ಗಣಪನ ಬೆಲೆ 300 ರಿಂದ 1 ಸಾವಿರ ಅಂತಿಮ‌. ಹಾಗಾಗಿ ಅತೀ ದುಬಾರಿಯೂ ಅಲ್ಲ, ಜೊತೆಗೆ ಸಾಗಣೆ ಮಾಡಲು ಬಹಳ ಕಡಿಮೆ ತೂಕ.

ಗಣೇಶ ಹಬ್ಬದ ನಂತರ ವಿಸರ್ಜನೆ ಮಾಡಲು ಕೂಡ ತುಂಬಾ ಸುಲಭ. ಅಲ್ಲದೆ ಯಾವುದೇ ರೀತಿ ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಇದು ನೀರಿಗೆ ಹಾಕಿದ ಕೂಡಲೇ ಕರಿಗೆ ಹೋಗುತ್ತದೆ. ನಂತರ ಗೊಬ್ಬರವಾಗಿ ಕೂಡ ಪರಿವರ್ತನೆ ಆಗುತ್ತದೆ.

ಹಾಗಾಗಿ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಬರುವವರು ಈಗಾಗಲೇ ಗಣಪತಿಯನ್ನ ಬುಕ್ ಮಾಡಿಕೊಂಡು ಹೋಗಿದ್ದಾರೆ. ಪ್ರಮುಖವಾಗಿ ಯಾವುದೇ ಗಣಪತಿ ಕೊಂಡರೂ, ಅದರ ಪಕ್ಕದಲ್ಲಿ ಸಗಣಿಯಿಂದ ಮಾಡಿದ ಬೆನಕ ಇಡುವುದು ವಾಡಿಕೆ. ಹಾಗಾಗಿ ಸಗಣಿ ಗಣಪನನ್ನೇ ತೆಗೆದುಕೊಂಡು ಹೋದರೆ ಇನ್ನೂ ಅನುಕೂಲ ಎಂಬುದು ಜನರ ನಂಬಿಕೆ.

ಒಟ್ಟಾರೆ ಮಾರುಕಟ್ಟೆಗೆ ಈಗಾಗಲೇ ಪಿಓಪಿ, ಮಣ್ಣಿನ ಗಣಪ ಎಂಟ್ರಿ ಆಗಿದ್ದು, ಜನ ಸಗಣಿ ಗಣಪನನ್ನ ನೋಡಿ ಆಶ್ಚರ್ಯ ಪಡುವುದಂತೂ ಸತ್ಯ.  ಸಗಣಿ ಗಣಪನ್ನ ಕೂರಿಸುವ ಮೂಲಕ ಪರಿಸರ ಸ್ನೇಹಿ ಆಗಲಿ ಎಂಬುದು ನಮ್ಮ ಆಶಯ…

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

26 minutes ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

3 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

6 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

7 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

9 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

9 hours ago