ಗೋಮಯ ಗಣೇಶ: ಸಂಪೂರ್ಣ ಗೋವಿನ(ಹಸು) ಸಗಣಿಯಿಂದಲೇ ಗಣಪತಿ ತಯಾರಿ: ಅದು ಎಲ್ಲಿ ತಯಾರಿ ಆಗುತ್ತೆ, ಇದರ ಉಪಯೋಗ ಏನು ಅಂತೀರಾ….? ಇಲ್ಲಿದೆ ಮಾಹಿತಿ‌ ಓದಿ……

ಗೌರಿ ಗಣೇಶ ಹಬ್ಬಕ್ಕೆ‌ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಮನೆಯಲ್ಲಿ ಗಣೇಶ ಕೂರಿಸಲು ಈಗಾಗಲೇ ಎಲ್ಲಾ‌ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಅದರಲ್ಲೂ ಪಿಓಪಿ ಗಣೇಶ ಹೊರತುಪಡಿಸಿ ಮಣ್ಣಿನ ಗಣೇಶ ಸೇರಿ ಪರಿಸರ ಸ್ನೇಹಿ ಗಣಪತಿ ಕಡೆಗೆ ಜನ ಮನಸ್ಸು ಮಾಡುತ್ತಿದ್ದಾರೆ.

ಈ ಹಿನ್ನೆಲೆ ಮಾರುಕಟ್ಟೆಗೆ ಸಗಣಿ ಗಣಪ ಎಂಟ್ರಿ ಕೊಟ್ಟಿದ್ದು, ಜನ ಈ ಗಣೇಶ ಕೊಳ್ಳಲು ಈಗಾಗಲೇ ಬುಕ್ಕಿಂಗ್ ಮಾಡಿಕೊಳ್ಳುತ್ತಿದ್ದಾರೆ. ಏನಿದು ಸಗಣಿ ಗಣಪ, ಇದು ಸಿಗುವುದು ಎಲ್ಲಿ ಅಂತಿರಾ ಈ ಸ್ಟೋರಿ ಓದಿ……………

ಹಸುವಿನ ಸಗಣಿಯಿಂದ ಮಾಡಿದ ಗಣೇಶನ ವಿಗ್ರಹವೇ ಗೋಮಯ ಗಣೇಶ. ಸಂಪೂರ್ಣವಾಗಿ ನೈಸರ್ಗಿಕ ವಸ್ತುಗಳಿಂದ ಮಾಡಲ್ಪಟ್ಟಿರುತ್ತದೆ ಮತ್ತು ಯಾವುದೇ ರಾಸಾಯನಿಕ ಬಣ್ಣಗಳನ್ನು ಅಥವಾ ವಸ್ತುಗಳನ್ನು ಬಳಸುವುದಿಲ್ಲ. ಇದು ಪರಿಸರ ಸ್ನೇಹಿ ಮತ್ತು ನೈಸರ್ಗಿಕ ವಸ್ತುವಿನಿಂದ ತಯಾರಿಸಲ್ಪಟ್ಟಿರುವುದರಿಂದ ಪೂಜೆಯ ನಂತರ ಸುಲಭವಾಗಿ ಮಣ್ಣಿನಲ್ಲಿ ಕರಗಿ ಹೋಗುತ್ತದೆ. ನಂತರ ಗೊಬ್ಬರವಾಗಿ ಬಳಸಬಹುದು. ಇದು ಪರಿಸರಕ್ಕೆ ಹಾನಿಕಾರಕವಲ್ಲ ಮತ್ತು ಪೂಜೆಗೆ ಸೂಕ್ತವಾದ ವಸ್ತುವಾಗಿದೆ.

ಕೆಲವರು ಗೋಮಯ ಗಣೇಶನ ವಿಗ್ರಹವು ಮನೆಯಲ್ಲಿ ಧನಾತ್ಮಕ ಶಕ್ತಿ ಮತ್ತು ಸಂತೋಷವನ್ನು ತರುತ್ತದೆ ಎಂದು ನಂಬುತ್ತಾರೆ.

ಹಸುವಿನ ಸಗಣಿಯಲ್ಲಿ ಲಕ್ಷ್ಮಿ ದೇವಿಯ ವಾಸವಿರುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹೀಗಾಗಿ, ಗೋಮಯ ಗಣೇಶನನ್ನು ಪೂಜಿಸುವುದರಿಂದ ಮನೆಯಲ್ಲಿ ಸಮೃದ್ಧಿ ಮತ್ತು ಸಂತೋಷ ನೆಲೆಸುತ್ತದೆ ಎಂಬ ನಂಬಿಕೆಯಿದೆ. ಇತ್ತೀಚಿನ ದಿನಗಳಲ್ಲಿ, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡುತ್ತಿರುವ ಹಿನ್ನೆಲೆಯಲ್ಲಿ ಗೋಮಯ ಗಣೇಶನ ವಿಗ್ರಹಗಳು ಹೆಚ್ಚು ಜನಪ್ರಿಯವಾಗುತ್ತಿವೆ.

ಹೌದು, ಸಗಣಿ ಮುದ್ದೆಯಿಂದ ಗಣೇಶನ ಪ್ರತಿಮೆ ಮಾಡುತ್ತಿರುವ ಮಹಿಳೆಯರು, ಗಣಪನಿಗೆ ಹಸುವಿನ ಗಂಜಲದಿಂದ ಲೇಪನ ಮಾಡುತ್ತಿರುವ ವ್ಯಕ್ತಿ, ಉಜ್ಜುವ ವಸ್ತುವಿನಿಂದ ಗಣಪನಿಗೆ ಫೈನಲ್ ಟಚ್ ಕೊಡುತ್ತಿರುವ ಕೆಲಸಗಾರ,. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯದ ಪಕ್ಕದಲ್ಲಿರುವ ರಾಷ್ಟ್ರೋತ್ಥಾನ ಗೋಶಾಲೆಯಲ್ಲಿ.

ಗೋಶಾಲೆಯಲ್ಲಿರುವ ನೂರಾರು ಗೋವುಗಳ(ಹಸುಗಳ) ಸಗಣಿಯನ್ನು ಒಣಗಿಸಿ ಪುಡಿ ಮಾಡಿದ ನಂತರ, ಗಮ್ ರೀತಿಯ ವಸ್ತುವನ್ನ ಬಳಸಿ, ಒಂದು ರೀತಿಯ ಮುದ್ದೆ ಆಕಾರದಲ್ಲಿ ಅದನ್ನ ತಯಾರಿಸಿ, ಗಣೇಶ ಆಕೃತಿಯ ಅಚ್ಚುಗಳಿಗೆ ಸಗಣಿ ಹಾಕಲಾಗುತ್ತದೆ. ನಂತರ ಕೈಯಿಂದ ಸಂಪೂರ್ಣವಾಗಿ ಅವುಗಳನ್ನು ಆಕಾರ ಮಾಡಿ, ನಂತರ ಗಂಜಲದಿಂದ ಲೇಪನ ಮಾಡುತ್ತಾರೆ. ಎರಡು ಮೂರು ದಿನ ಒಣಗಿ ನಂತರ ಪರಿಸರಕ್ಕೆ ಹೊಂದಿಕೊಳ್ಳುವ ಬಣ್ಣವನ್ನ ಮಾಡುತ್ತಾರೆ.

ಹೀಗೆ ಸಂಪೂರ್ಣ ವಾಗಿ ಸಗಣಿಯಿಂದ ಮಾಡುವ ಗಣಪನಿಗೆ ಬಾರಿ ಬೇಡಿಕೆ ಇದೆ. ಇವುಗಳು ಮನೆಯಲ್ಲಿ ಇಡಲು ತುಂಬಾ ಅನುಕೂಲ. ಅರ್ಧ ಅಡಿಯಿಂದ ಹಿಡಿದು ಒಂದು ಅಡಿಯವರೆಗೆ ಸಗಣಿ ಗಣಪತಿ ಸಿಗುತ್ತವೆ. ಹಣದಲ್ಲೂ ಕೂಡ ಕಡಿಮೆ ಬೆಲೆಗೆ ಸಿಗುತ್ತದೆ. ಒಂದು ಗಣಪನ ಬೆಲೆ 300 ರಿಂದ 1 ಸಾವಿರ ಅಂತಿಮ‌. ಹಾಗಾಗಿ ಅತೀ ದುಬಾರಿಯೂ ಅಲ್ಲ, ಜೊತೆಗೆ ಸಾಗಣೆ ಮಾಡಲು ಬಹಳ ಕಡಿಮೆ ತೂಕ.

ಗಣೇಶ ಹಬ್ಬದ ನಂತರ ವಿಸರ್ಜನೆ ಮಾಡಲು ಕೂಡ ತುಂಬಾ ಸುಲಭ. ಅಲ್ಲದೆ ಯಾವುದೇ ರೀತಿ ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಇದು ನೀರಿಗೆ ಹಾಕಿದ ಕೂಡಲೇ ಕರಿಗೆ ಹೋಗುತ್ತದೆ. ನಂತರ ಗೊಬ್ಬರವಾಗಿ ಕೂಡ ಪರಿವರ್ತನೆ ಆಗುತ್ತದೆ.

ಹಾಗಾಗಿ ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಬರುವವರು ಈಗಾಗಲೇ ಗಣಪತಿಯನ್ನ ಬುಕ್ ಮಾಡಿಕೊಂಡು ಹೋಗಿದ್ದಾರೆ. ಪ್ರಮುಖವಾಗಿ ಯಾವುದೇ ಗಣಪತಿ ಕೊಂಡರೂ, ಅದರ ಪಕ್ಕದಲ್ಲಿ ಸಗಣಿಯಿಂದ ಮಾಡಿದ ಬೆನಕ ಇಡುವುದು ವಾಡಿಕೆ. ಹಾಗಾಗಿ ಸಗಣಿ ಗಣಪನನ್ನೇ ತೆಗೆದುಕೊಂಡು ಹೋದರೆ ಇನ್ನೂ ಅನುಕೂಲ ಎಂಬುದು ಜನರ ನಂಬಿಕೆ.

ಒಟ್ಟಾರೆ ಮಾರುಕಟ್ಟೆಗೆ ಈಗಾಗಲೇ ಪಿಓಪಿ, ಮಣ್ಣಿನ ಗಣಪ ಎಂಟ್ರಿ ಆಗಿದ್ದು, ಜನ ಸಗಣಿ ಗಣಪನನ್ನ ನೋಡಿ ಆಶ್ಚರ್ಯ ಪಡುವುದಂತೂ ಸತ್ಯ.  ಸಗಣಿ ಗಣಪನ್ನ ಕೂರಿಸುವ ಮೂಲಕ ಪರಿಸರ ಸ್ನೇಹಿ ಆಗಲಿ ಎಂಬುದು ನಮ್ಮ ಆಶಯ…

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago