ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

3 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

4 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

16 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

19 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

20 hours ago