ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.
ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.
ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…