ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

3 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

18 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago