ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

1 hour ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

2 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

2 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

2 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

5 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

6 hours ago