ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.
ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.
ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…