ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago