ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

20 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago