ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.
ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.
ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…