ಗೋಮಾಳ ರಕ್ಷಣೆಗಾಗಿ ಹೋರಾಟಕ್ಕೆ ಸಜ್ಜಾದ ಮುಕ್ಕಡಿಘಟ್ಟ ಗ್ರಾಮಸ್ಥರು

ತಾಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದಲ್ಲಿ ಗೋಶಾಲೆ ಸ್ಥಾಪನೆ ಬೇಡ ಹಾಗೂ ಗೋಶಾಲೆ ನಿರ್ಮಾಣಕ್ಕೆಂದು ಮಂಜೂರು ಮಾಡಿರುವ ಗೋಮಾಳದ ಜಾಗವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಸರ್ಕಾರದ ಆದೇಶದ ವಿರುದ್ಧ ಹೋರಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಚುನಾವಣಾ ನೀತಿ ಸಂಹಿತೆ ಆರಂಭಕ್ಕೂ ಮುನ್ನಾ ಸಮರ್ಥನಂ ಸಂಸ್ಥೆ ಹೆಸರಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮುಕ್ಕಡಿಘಟ್ಟ ಗ್ರಾಮದ ಸರ್ವೇ ನಂಬರ್ 37 ರಲ್ಲಿ 25 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಗೋಶಾಲೆ ಪ್ರಾರಂಭಿಸಲು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಕೃತಕವಾಗಿ ಪ್ರಕಟಿತಗೊಂಡಿರುವ ವಿಷಯ ತಿಳಿದ ಗ್ರಾಮಸ್ಥರು ಭಾನುವಾರ ಮುಂಜಾನೆ ಸಭೆ ಸೇರಿ ಚರ್ಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಮಾತನಾಡಿ, ಮುಕ್ಕಡಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಗಮನಕ್ಕೆ ಬಾರದೆ, ಯಾವುದೇ ನೋಟಿಸ್ ನೀಡದೆ ಏಕಾಏಕಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಿದನ್ನು ನಾವು ಖಂಡಿಸಬೇಕು, ತಲಾತಲಾಂತರದಿಂದ ನಮ್ಮ ಗ್ರಾಮದ ಬಡ ರೈತರು ತಮ್ಮ ಕುರಿ,ಮೇಕೆ ಹಸುಗಳನ್ನು ಸರ್ವೇ ನಂ.37 ಸೇರಿದಂತೆ‌ ಸುತ್ತ ಮುತ್ತ ಮೇವಿಗಾಗಿ ಉಳುಸಿಕೊಂಡಿರುವ ಗೋಮಾಳವನ್ನು ಬೇಕಾಬಿಟ್ಟಿಯಾಗಿ ಖಾಸಗಿ ಸಂಸ್ಥೆಗೆ ಮಂಜೂರು ಮಾಡಿರುವುದನ್ನು ಒಪ್ಪಬಾರದು ಆದ್ದರಿಂದ ನಾವೆಲ್ಲರೂ ಒಟ್ಟಾಗಿ ಈ ಆದೇಶದ ವಿರುದ್ಧ ಹೋರಾಡಬೇಕು ಎಂದರು.

ದಲಿತ ಸಂಘಟನೆಯ ಮುಖಂಡ ನಾಗರಾಜ್ ಮಾತನಾಡಿ ಈಗಾಗಲೇ ಇದೇ ಸರ್ವೆ ನಂಬರ್ ನಲ್ಲಿ ನಮ್ಮ ಗ್ರಾಮದ ಭೂರಹಿತ ರೈತರು ನಮೂನೆ 57 ರ ಅಡಿಯಲ್ಲಿ ಭೂ ಮಂಜೂರಾತಿಗೋಸ್ಕರ ಅರ್ಜಿ ಸಲ್ಲಿಸಿದ್ದಾರೆ ಹಾಗೂ ಬಹಳ ವರ್ಷಗಳಿಂದ ಸ್ಮಶಾನ ಜಾಗದ ಮಂಜೂರಾತಿಗಾಗಿ ಮನವಿ ಸಲ್ಲಿಸಿದ್ದೇವೆ. ಈ ಬೇಡಿಕೆಗಳನ್ನು ಪರಿಗಣಿಸದ ಸರ್ಕಾರ, ಸಮರ್ಥನಂ ಸಂಸ್ಥೆಗೆ ಜಮೀನು ಮಂಜೂರು ಮಾಡಲು ಸರ್ಕಾರವು ಎಷ್ಟೊಂದು ತರಾತುರಿ ವಹಿಸಿದೆ ಎಂಬುದು ಗೋಚರವಾಗುತ್ತದೆ ಎಂದರು.

ತೂಬಗೆರೆ ಹಿತರಕ್ಷಣ ಸಮಿತಿ ಸದಸ್ಯ ಉದಯ ಆರಾಧ್ಯ ಮಾತನಾಡಿ ಬೆಂಗಳೂರು ಮೂಲದ ಸಮರ್ಥನಂ ಸಂಸ್ಥೆಗೂ ನಮ್ಮ ತೂಬಗೆರೆ ಹೋಬಳಿಗೂ ಯಾವುದೇ ಸಂಬಂಧವಿಲ್ಲ, ಗೋಮಾಳ ರಕ್ಷಣೆ ಹೋರಾಟಕ್ಕೆ ನಮ್ಮ ಬೆಂಬಲ ವಿರುತ್ತದೆ. ಮುಂದಿನ ದಿನಗಳಲ್ಲಿ ಈ ಕುರಿತು ಹೋರಾಟಕ್ಕೆ ತಾಲೂಕಿನ ಎಲ್ಲಾ ಸಂಘಟನೆಗಳು ರೈತ ಸಂಘದ ಸಹಾಯ ಪಡೆದು ಸರ್ಕಾರದ ಗಮನ ಸೆಳೆದು ಈ ಆದೇಶವನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ತೂಬಗೆರೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೆಂಕಟೇಶ್, ಗ್ರಾಮದ ಮುಖಂಡರಾದ ಶ್ರೀನಿವಾಸ್ ಆಚಾರ್ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ನವಕರ್ನಾಟಕ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಅಂಬರೀಶ್ ಗ್ರಾಮಸ್ಥರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago