ಗೋಮಾಳ ಸಂರಕ್ಷಿಸುವಂತೆ ಒತ್ತಾಯಿಸಿ ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ

ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡಿರುವ ಭೂಗಳ್ಳರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ಭೀಮ್ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭೀಮ್ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾಜ್, ತಾಲ್ಲೂಕಿನ ಕಸಬಾ ಹೋಬಳಿ, ಪಾಲನಜೋಗಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ, 18 ಎಕರೆ 20 ಗುಂಟೆ ಸಂಪೂರ್ಣ ಜಮೀನು ಗೋಮಾಳ ಎಂದು ಸರ್ಕಾರಿ ದಾಖಲೆಗಳಲ್ಲಿ ಸ್ಪಷ್ಟವಾಗಿ ದಾಖಲಾಗಿದೆ, ಅದರಲ್ಲಿ ರಂಗಮ್ಮ ಕೋಂ ವೆಂಕಟೇಶಯ್ಯ ಎಂಬುವರಿಗೆ ತಹಸೀಲ್ದಾರ್ ರ ಆದೇಶದಂತೆ ನಂಬರ್ 65/60-61 ರಂತ 2 ಎಕರೆ ಜಮೀನು ದರಖಾಸ್ತು ಮೂಲಕ ಮಂಜೂರಾಗಿದ್ದು, ಉಳಿಕೆ 16 ಎಕರೆ 20 ಗುಂಟೆ ಸರ್ಕಾರಿ ಜಮೀನು ಭೂಗಳ್ಳರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ಮೊಸ ಮಾಡಿದ್ದಾರೆ ಎಂದು ಆರೋಪಿಸಿದರು.

18 ಎಕರೆ ಭೂಮಿಯಲ್ಲಿ ಸುಮಾರು ಮೂರು ಎಕರೆಯಷ್ಟು ಭೂ ಪರಿವರ್ತನೆಯಾಗಿದ್ದು ಸದರಿ ಸ್ಥಳದಲ್ಲಿ 106 ನಿವೇಶನಗಳನ್ನು ವಿಂಗಡಿಸಿದ್ದಾರೆ, ಕೊಡಿಗೆಹಳ್ಳಿ ಪಂಚಾಯತಿ ವ್ಯಾಪ್ತಿಗೆ ಬರುವ ಈ ಸದರಿ ನಿವೇಶನಗಳಿಗೆ ಪಂಚಾಯಿತಿಯಲ್ಲಿ ಖಾತೆ ಸಹ ದಾಖಲಾಗಿಲ್ಲ, ಆದರೂ ನಕಲಿ ದಾಖಲೆ ಸೃಷ್ಟಿ ಮಾಡಿ ಮಾರಾಟ ಮಾಡಿ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಸುತ್ತಿದ್ದಾರೆ.

ಸ್ವಂತ ನಿವೇಶನ ಇಲ್ಲದ ನೂರಾರು ಕುಟುಂಬಗಳು ಬೀದಿಯಲ್ಲಿವೆ, ಆದರೆ ಭೂಗಳ್ಳರು ಕೋಟ್ಯಾಂತರ ರೂಗಳ ಭೂಮಿಯನ್ನು ಕಬಳಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ‌ ಹಿಂದೆ ಅಧಿಕಾರಿಗಳಿಗೆ ಎರಡು ಬಾರಿ ಅಕ್ರಮ ಭೂ ಒತ್ತುವರಿ ಬಗ್ಗೆ ಮನವಿ ಸಲ್ಲಿಸಿದ್ದೇವೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ, ತಹಶಿಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಈ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ದಾಖಲಾತಿಗಳನ್ನು ಪರಿಶೀಲನೆ ನಡೆಸಿ ಕಾನೂನು ಉಲ್ಲಂಘಿಸಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಭೂಮಿಯನ್ನು ಭೂ ರಹಿತರಿಗೆ ಹಂಚಬೇಕೆಂದು ಒತ್ತಾಯಿಸಿದರು.

ಭೂಗಳ್ಳರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಹಸೀಲ್ದಾರ್ ಮೋಹನ ಕುಮಾರಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಕರ್ನಾಟಕ ಭೀಮ್ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ರಾಮಲಿಂಗಯ್ಯ, ಬೆಂ.ಗ್ರಾ. ಜಿಲ್ಲಾಧ್ಯಕ್ಷ ನಂಜೇಶ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ್, ತಾಲ್ಲೂಕು ಅಧ್ಯಕ್ಷ ದಾಳಪ್ಪ ದಲಿತ ಮುಖಂಡ ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

10 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

19 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

23 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago